Tuesday, July 23, 2024
ಬೆಂಗಳೂರು ವಿವಿ: ಸಂಶೋಧನಾ ವಿದ್ಯಾರ್ಥಿ ಶ್ರೀನಿವಾಸ ಎನ್ ರವರಿಗೆ : 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಆಯೋಜಿಸಿದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ 'ಮೀಡಿಯಾ ಸ್ಪಿಯರ್- 2024, "ಭಾರತೀಯ ಮಾಧ್ಯಮ ಉದ್ಯಮದ ರೂಪಾಂತರ" ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನಡೆಸಲಾಯಿತು.
ಇದರ ಪ್ರಯುಕ್ತ ಕನ್ನಡ ಸಾಹಿತ್ಯದಲ್ಲಿ ಸಾಧನೆಗೈದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದಾರ್ಥಿ ಶ್ರೀನಿವಾಸ ಎನ್ ರವರಿಗೆ: ' 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನವನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷ ಖಾನಂ, ಬೆಂವಿವಿಯ ಕುಲಸಚಿವ ಶೇಕ್ ಲತೀಫ್, ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮಖನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಉಪೇಂದ್ರ ಪಾಢಿ, ವಿವಿಯ ಬೋಧಕ ಮತ್ತು ಭೋಧಕೇತರ ವರ್ಗದವರು, ಸ್ನಾತಕೋತ್ತರ ಮತ್ತು ಸಂಶೋಧನಾರ್ಥಿಗಳು, ಮತ್ತಿತರರು ಸಮ್ಮುಖದಲ್ಲಿ ಸ್ಮರಿಣಿಕೆ ನೀಡಿ ಗೌರವಿಸಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿಶ್ವಪ್ರಕಾಶ ಟಿ ಮಲಗೊಂಡಗೆ "ಬೆಸ್ಟ್ ಆಕ್ಟರ್" ಅವಾರ್ಡ್
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ "ಬೆಸ್ಟ್ ಆಕ್ಟರ್" ಅವಾರ್ಡ್ ದೊರೆತಿದೆ.
ಭಾನುವಾರ ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ ಪ್ರೈ.ಲಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಆಯೋಜಿಸಿದ "ಕರುನಾಡ ಕಿರುಚಿತ್ರೋತ್ಸವ" ದಲ್ಲಿ ವಿಶ್ವಪ್ರಕಾಶ ಟಿ ಮಲಗೊಂಡ ಅವರ ಸಿನಿಮಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಕರುನಾಡ ಕಿರುಚಿತ್ರೋತ್ಸವದಲ್ಲಿ "ಸಿನಿ ಸಿರಿ" ಅವಾರ್ಡ್ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಕರುನಾಡ ಕಿರುಚಿತ್ರೋತ್ಸವ (Short Film Festival) ಸ್ಪರ್ಧೆಯಲ್ಲಿ "ತುಷಾರ್" ಚಿತ್ರವೂ ಸಹ ಭಾಗವಹಿಸಿತ್ತು. ಚಿತ್ರದಲ್ಲಿನ ನಾಯಕನ ಅಭಿನಯಕ್ಕೆ "ಬೆಸ್ಟ್ ಆಕ್ಟರ್ ಅವಾರ್ಡ" ನೀಡಿ ಗೌರವಿಸಿದೆ.
ಕಿರುಚಿತ್ರೋತ್ಸವದಲ್ಲಿ ರಾಜ್ಯದ ಹಲವು ಕಿರುಚಿತ್ರಗಳು ಭಾಗವಹಿಸಿದ್ದವು. ಬೆಸ್ಟ್ ಶಾರ್ಟ ಫಿಲಂ, ಬೆಸ್ಟ್ ಸ್ಟೋರಿ, ಹೀಗೆ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ.
ಅದರಲ್ಲಿ "2024 ಅತ್ಯುತ್ತಮ ನಟ ಬೆಸ್ಟ್ ಆಕ್ಟರ್" ಎಂದು ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಅವಾರ್ಡ್ ನೀಡಲಾಗಿದೆ.
ಕಿರುಚಿತ್ರೋತ್ಸವದಲ್ಲಿ ಹಿರಿಯ ಚಲನಚಿತ್ರ ಸಾಹಿತಿ ಹಾಗೂ ಕಿರುಚಿತ್ರೋತ್ಸವದ ಅಧ್ಯಕ್ಷ ಮಹಾಂತೇಶ ಮಲ್ಲನಗೌಡರ, ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಲನಚಿತ್ರ ಖ್ಯಾತಿಯ ಶಿವಮ್ಮ ಯರೆಹಂಚಿನಾಳ, ಚಲನಚಿತ್ರ ನಿರ್ದೇಶಕ ಬಸವರಾಜ ಕೊಪ್ಪಳ, ಅಳವಂಡಿ ಪಿಎಸ್ಐ ನಾಗಪ್ಪ ಕೆ, ಹಿರಿಯ ಪತ್ರಕರ್ತ ಜಿ ಎಸ್ ಗೋನಾಳ, ಸಿನಿಮಾ ಪತ್ರಕರ್ತ ಬಸವರಾಜ ಕರುಗಲ್ , ಸಾಹಿತಿ ಸುರೇಶ ಕಂಬಳಿ, ಪ್ರಾಧ್ಯಾಪಕ ಪ್ರೊ. ಶರಣಪ್ಪ ಬಿಳಿಯಲಿ, ಸಮಾಜ ಸೇವಕಿ ಶಾರದಾ ಪಾನಘಂಟಿ, ಉಪನ್ಯಾಸಕ ಡಾ.ಸಿದ್ದಲಿಂಗಪ್ಫ ಕೋಟ್ನೆಕಲ್, ಹೈಬ್ರೀಡ್ ನ್ಯೂಸ್ ಸಂಸ್ಥಾಪಕ ಹಾಗೂ ಕಿರುಚಿತ್ರೋತ್ಸವ ಆಯೋಜಕ ಡಾ.ಬಿ ಎನ್ ಹೊರಪೇಟಿ, ನಟ, ನಟಿ, ನಿರ್ದೇಶಕ, ನಿರ್ಮಾಪಕ, ಬರಹಗಾರರು, ಕೊಪ್ಪಳ ಸಿನಿಮಾ ಬಳಗ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Saturday, July 20, 2024
Friday, July 19, 2024
ತಂಬಾಕು ಸೇವನೆ ನಿಯಂತ್ರಣಕ್ಕೆ ಜೀವನಶೈಲಿ ಬದಲಾವಣೆ ಒಂದೇ ದಾರಿ
ವಿಜಯಪುರ: ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಪಿಡುಗು ಹೆಚ್ಚಾಗುತ್ತಿದೆ, ಬಾಯಿ ಹುಣ್ಣು, ಅನ್ನನಾಳ, ಶ್ವಾಸಕೊಶ, ಮೂತ್ರಕೋಶ, ಗಂಟಲು ಕ್ಯಾನ್ಸರ್ ನಂತಹ ಭಯಾನಕ ರೋಗಗಳು ತಂಬಾಕು ಸೇವನೆಯಿಂದಲೆ ಹೆಚ್ಚಾಗಿ ಬರುತ್ತಿವೆ. ಎಂಬ ಅರಿವು ಸಾಮಾನ್ಯ ಜನರಿಗೆ ಗೊತ್ತಿಲ್ಲ, ಗೊತ್ತಿದ್ದರೂ ಸಹ ನಿರ್ಲಕ್ಷ ಮಾಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಯಾವುದೇ ವ್ಯಕ್ತಿ ತಮ್ಮ ಜೀವನದಲ್ಲಿ ನಿಲುವು ಮತ್ತು ಸರಿಯಾದ ಜೀವನಶೈಲಿ ಬದಲಾವಣೆ ಮಾಡಿಕೊಂಡಲರೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದು ಎಂದು ವಿಜಯಪುರ ತಾಲೂಕು ಆರೊಗ್ಯ ಅಧಿಕಾರಿಗಳಾದ ಡಾ|| ಪರಶುರಾಮ ಹಿಟ್ನಳ್ಳಿ ಹೇಳಿದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಬೆಂಗಳೂರು ಪಿ.ಜಿ.ಡಿ.ಹೆಚ್.ಪಿ.ಈ. ವಿಭಾಗದ ಮೇಲ್ವಿಚಾರಣೆ ಆಧಾರಿತ ಕ್ಷೇತ್ರ ತರಬೇತಿ 2024ರ ಅಡಿಯಲ್ಲಿ “ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ” ಉದ್ಘಾಟಿಸಿ ಡಾ|| ಪರಶುರಾಮ ಹಿಟ್ನಳ್ಳಿ ಮಾತನಾಡಿದರು.
ಸಾರ್ವಜನಿಕ ಆರೋಗ್ಯ ಕುರಿತು ಹಲವಾರು ಯೋಜನೆಗಳು ಸರಕಾರದಿಂದ ಲಭ್ಯವಿದ್ದು, ಆ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು, ವಿಶೇಷವಾಗಿ ಯುವಕರು/ಯುವತಿಯರು ಹೆಚ್ಚಾಗಿ ಭಾಗವಹಿಸಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಮಾಹಿತಿ ಪಡೆದುಕೊಂಡು ತಮ್ಮ ತಮ್ಮ ಮನೆಯ ಹಿರಿಯರಿಗೆ ಕಿರಿಯರಿಗೆ ಮಾಹಿತಿ ತಿಳಿಸಿಕೊಡಬೇಕು. ಎಂದು ಜುಮನಾಳ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಶ್ರೀ ಮುಕ್ಕಣ್ಣ ನಾಯಕ ಹೇಳಿದರು.
ಯಾವುದೇ ಲಿಂಗ ಭೇಧವಿಲ್ಲದೆ ಪುರುಷರು, ಮಹಿಳೆಯರು, ಯುವಕ, ಯುವತಿಯರು ಎಲ್ಲರಲ್ಲೂ ತಂಬಾಕು ಸೇವನೆ ಒಂದು ಚಟವಾಗಿದೆ, ಈ ಚಟದಿಂದ ಪಾರಾಗಲು ಆರೋಗ್ಯ ಇಲಾಖೆ ವತಿಯಿಂದ ಹಲವಾರು (ಐ.ಈ.ಸಿ./ಬಿ.ಸಿ.ಸಿ) ಜಾಗೃತಿ, ಜ್ಞಾನ, ಅರಿವು ಮತ್ತು ವರ್ತನೆಗಳ ಬದಲಾವಣೆಯುತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ವಿಭಾಗದಿಂದ ಕರಪತ್ರಗಳು, ಬಿತ್ತಿಪತ್ರಗಳು, ಬೀದಿ ನಾಟಕ, ವಿವಿಧ ಜನಪದ ಕಲೆಗಳ ಮುಖಾಂತರ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಜಿ. ಎಮ್. ಕೊಲೂರ ಹೇಳಿದರು.
ಉಸಿರು ಜೀವನಕ್ಕೆ ಅವಶ್ಯಕ, ಉಸಿರಾಡುವ ಗಾಳಿ ಸ್ವಚ್ಛವಾಗಿರುವುದು ಅತ್ಯಂತ ಅವಶ್ಯಕ ಆದರೆ ಧೂಮಪಾನಿಗಳು ತಾವು ಕೆಡುವುದಲ್ಲದೆ ಧೂಮಪಾನ ಮಾಡದೇ ಇರುವ ಅಮಾಯಕ ಮಕ್ಕಳು ಕುಟುಂಬಸ್ಥರು ತಂಬಾಕು ಹೊಗೆ ಮಿಶ್ರಿತ ಗಾಳಿ ಸೇವಿಸಲು ಪ್ರೋಕ್ಷವಾಗಿ ಕಾರಣರಾಗಿದ್ದಾರೆ. ಅದರಿಂದಾಗಿ ಮಕ್ಕಳಲ್ಲೂ ಸಹ ಕ್ಯಾನ್ಸರ ಅಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಪಿ.ಜಿ.ಡಿ.ಹೆಚ್.ಪಿ.ಈ ವಿಭಾಗದ ಉಪನ್ಯಾಸಕರಾದ ಡಾ|| ಮಂಜುನಾಥ ಟಿ. ಎ. ರವರು ಆತಂಕ ವ್ಯಕ್ತಪಡಿಸಿದರು.
ತಂಬಾಕಿನಲ್ಲಿರುವ ಸುಮಾರು ಆರು ಸಾವಿರ ರಸಾಯನಿಕಗಳು ಹಲವಾರು ಭಯಂಕರ ರೋಗಗಳಿಗೆ ಕಾರಣವಾಗಿವೆ ಅದರಲ್ಲೂ ಕೂದಲು ಉದರುವುದು. ಕಣ್ಣಿನ ಪೊರೆ/ನರದೌರ್ಬಲ್ಯ, ದಂತಕ್ಷಯ, ಶ್ವಾಸಕೊಶ ಕ್ಯಾನ್ಸರ್, ಹೃದಯಾಘಾತ, ಹೊಟ್ಟೆ ಅಲ್ಸರ್, ಪಾರ್ಶ್ವವಾಯುದಂತ ಭಯಾನಕ ರೋಗಗಳು ಸಂಭವಿಸುತ್ತವೆ. ಧೂಮಪಾನಿಗಳಲ್ಲಿ ಕ್ಷಯರೋಗ ಬರುವ ಅಪಾಯ ಮೂರು ಪಟ್ಟು ಇತರರಿಗಿಂತ ಹೆಚ್ಚಿದೆ. ಅಂದರೆ ಮರಣ ಪ್ರಮಾಣ 3 ರಿಂದ 4 ಪಟ್ಟು ಹೆಚ್ಚಿದೆ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಸುರೇಶ ಹೊಸಮನಿ ತಮ್ಮ ಸುಧೀರ್ಘ ಭಾಷಣದಲ್ಲಿ ಎಚ್ಚರಿಕೆ ಸಂದೇಶ ನೀಡಿದರು.
ಈ ಆರೋಗ್ಯ ಜಾಗೃತಿ ಕಾರ್ಯಕ್ರಮ ಜುಮನಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಫಿರ್ದೋಶ ಮೆಹಬೂಬಸಾಬ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜಮನಾಳ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಸುರೇಶ ಕೊಲಕಾರ ಕಾರ್ಯಕ್ರಮಕ್ಕೆ ಸೌಲಭ್ಯಗಳನ್ನು ಒದಗಿಸಲು ಸಹಕರಿಸಿದರು. ಕಾರ್ಯಕ್ರಮವನ್ನು ಶ್ರೀ ದಿನೇಶ ಕೋರಿ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಪ್ರಶಿಕ್ಷಣಾರ್ಥಿ ಶ್ರೀ ಶಂಕರಪ್ಪ ಎಂ. ಚಲವಾದಿ ಕಾರ್ಯಕ್ರಮ ನೆರವೇರಿಸಿ ಕೊಟ್ಟರು. ಟಿ.ಹೆಚ್.ಓ. ಕಾರ್ಯಾಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್. ಆರ್. ಬಾಗವಾನ ವಂದಿಸಿದರು.
ಜುಮನಾಳ ಗ್ರಾಮ ಪಂಚಾಯತಿ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಹೊನಕಟ್ಟಿ, ಎನ್. ಟಿ. ಸಿ. ಪಿ. ವಿಭಾಗದ ಶ್ರೀಕಾಂತ ಪೂಜಾರಿ, ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಬಿರಾದಾರ, ಶ್ರೀಮತಿ ಕೆ. ಸಿ. ಇಂಡಿಕರ, ಶ್ರೀಮತಿ ಆಶಾ ಬಿದರಿ, ಗಾಮದ ಪಂಚಾಯತ ಸದಸ್ಯರು ಆಶಾ ಕಾರ್ಯಕರ್ತರು ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಜ್ಯ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಬೆಂಗಳೂರು, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ, ತಾಲ್ಲೂಕ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊನಗನಹಳ್ಳಿ ಹಾಗೂ ಜುಮನಾಳ ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


