Thursday, August 29, 2024

ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಗತ್ಯ : ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಗತ್ಯ. ಕ್ರೀಡೆ ಎನ್ನುವುದು ನಮ್ಮ ಪ್ರತಿನಿತ್ಯ ಜೀವನದ ಒಂದು ಭಾಗವಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ, ಹಾಗೂ ದೈಹಿಕ ಶಿಕ್ಷಣ ಅಧ್ಯಯನ ವಿಭಾಗ, ದೈಹಿಕ ಶಿಕ್ಷಣ ನಿರ್ದೇಶಕರು ಸಂಘ  ಮತ್ತು ವಿಜಯಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಇವುಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಮಹಿಳಾ ಕಬಡ್ಡಿ ವೈಭವ-2024’ ಅಂತಾರಾಜ್ಯ ಹೊನಲು ಬೆಳಕಿನ ಮಹಿಳಾ ಮುಕ್ತ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಎಲ್ಲರಿಗೂ ಕ್ರೀಡಾಶಕ್ತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ನೀವೆಲ್ಲರೂ ಭಾಗಿಯಾಗಿದ್ದು ಹೆಮ್ಮೆಯ ವಿಷಯ ಎಂದರು.


ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಕಬಡ್ಡಿ ಗ್ರಾಮೀಣ ಕ್ರೀಡೆ ಎಂದೇ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಈ ಪಂದ್ಯ ಮನೋಲ್ಲಾಸವನ್ನು ಹೆಚ್ಚಿಸುವ ಮೂಲಕ ದೈಹಿಕವಾಗಿ ನಮ್ಮನ್ನು ಸದೃಡರನ್ನಾಗಿಡುತ್ತದೆ. ನಿಮಗೆ ಇದೊಂದು ಒಳ್ಳೆಯ ಅವಕಾಶ. ಸೋಲು-ಗೆಲವು ಎಲ್ಲದರಲ್ಲೂ ಇರುತ್ತದೆ. ಭಾಗವಹಿಸುವುದು ಅತೀ ಮುಖ್ಯ. ನಿಮ್ಮೆಲ್ಲರಿಗೂ ಶುಭವಾಗಲಿ ಎಂದು ವಿದ್ಯಾರ್ಥಿನಿಯರಿಗೆ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಕ್ರೀಡೆಗಳು ವ್ಯಕ್ತಿಯ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವುದರ ಜೊತೆಗೆ, ಸಹಕಾರ ಮತ್ತು ಸಂಯಮದಂತಹ ಶ್ರೇಷ್ಠ ಮೌಲ್ಯಗಳನ್ನು ಬೆಳೆಸುತ್ತವೆ. ಕ್ರೀಡಾ ಸ್ಪರ್ಧೆಗಳು ಆಟಗಾರರಿಗೆ ಸೋಲು-ಗೆಲುವಿನ ಅನುಭವವನ್ನು ಕಲಿಸುತ್ತವೆ. ಇದರಿಂದ ಜೀವನದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಮತ್ತು ಸಹನೆ ಬೆಳೆಯುತ್ತದೆ. 

ಕ್ರೀಡೆಗಳಿಂದ ದೊರೆಯುವ ಶಿಸ್ತು, ಕಠಿಣ ಪರಿಶ್ರಮ, ಮತ್ತು ತಂಡದ ಆತ್ಮವಿಶ್ವಾಸವು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ. ಇದರಿಂದ ಕ್ರೀಡೆ ಕೇವಲ ವೈಯಕ್ತಿಕ ಬೆಳವಣ ಗೆಯಲ್ಲ, ಇಡೀ ಸಮುದಾಯದ ಸಮಗ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಭಾರತದ ಹಾಕಿ ದಂತಕಥೆ, ಮೇಜರ ಧ್ಯಾನಚಂದರವರ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಗಣ್ಯರು ಧ್ಯಾನಚಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ರಮೇಶ ಪಾಟೀಲ, ವಿವಿಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಶಿವಯೋಗಿ ಎಲಿ, ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ವಿವಿಧ ರಾಜ್ಯಗಳ ಕಬಡ್ಡಿ ತಂಡ, ನಗರದ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರು, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ನಾಡಗೀತೆ ಮತ್ತು ಮಹಿಳಾ ಗೀತೆ ಹಾಡಿದರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಸಕ್ಪಾಲ್ ಹೂವಣ್ಣ ಸ್ವಾಗತಿಸಿದರು. ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 26, 2024

ಸೆ.1 ರಂದು ಹಿರಿಯ ಹೋರಾಟಗಾರ ಕಾಂ. ಭೀಮಶಿ ಕಲಾದಗಿರವರಿಗೆ ನುಡಿ ನಮನ ಕಾರ್ಯಕ್ರಮ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ:   ನಗರದ ಇಂಡಿ ರೋಡ ಎಪಿಎಂಸಿ ಯಾರ್ಡ್ ದಲ್ಲಿನ ಶ್ರೀ ನೀಲಕಂಠೇಶ್ವರ ಮಂಗಲ ಕಾರ್ಯಾಲಯ ವಿಜಯಪುರದಲ್ಲಿ  ದಿನಾಂಕ: 01-09-2024 ರಂದು ರವಿವಾರ ಬೆಳಗ್ಗೆ 11-00 ಘಂಟೆಗೆ ದಿವಂಗತ ಕಾಂ. ಭೀಮಶಿ ಕಲಾದಗಿ ರವರ  "ನುಡಿ ನಮನ" ಕಾರ್ಯಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ವಿಜಯಪುರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ.ಪಾಟೀಲ, ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕಾಂ, ಯು ಬಸವರಾಜ,  ಸಿಐಟಿಯು ರಾಜ್ಯ ಅದ್ಯಕ್ಷೆ, ಅಂಗನವಾಡಿ ನೌಕರರ ಸಂಘದ ರಾಜ್ಯ ಅದ್ಯಕ್ಷರಾದ ಎಸ್ ವರಲಕ್ಷ್ಮೀ, ಅಖಿಲ ಭಾರತ ಜನವಾದಿ ಮಹಿಳಾ ಸಂಘದ ರಾಜ್ಯ ಉಪಾಧ್ಯಕ್ಷರಾದ  ಕಾಂ. ಕೆ ನೀಲಾ,  ಕ,ರಾ,ಗ್ರಾಮ ಪಂಚಾಯತ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಕಾಂ, ಎಂ ಬಿ ನಾಡಗೌಡ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾದ್ಯಕ್ಷರಾದ ಕಾಂ ಬಿ ಎಸ್ ಸೊಪ್ಪಿನ, ಕಾಂ ಜಿ ನಾಗರಾಜ ಪ್ರ, ಕಾರ್ಯದರ್ಶಿ ಕಾಂ. ಟಿ ಯಶವಂತ ,  ಹಾಗೂ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಮುಖಂಡರು, ರೈತ-ಕಾರ್ಮಿಕರು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ  ಅಣ್ಣಾರಾಯ ಈಳಗೆರ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Saturday, August 24, 2024

ಜಿಲ್ಲಾಸ್ಪತ್ರೆ ಹಾಗೂ ವಿವಿಧ ವಸತಿ ನಿಲಯಗಳಿಗೆ ಉಪಲೋಕಾಯುಕ್ತರ ಭೇಟಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಸೂಚನೆ


 ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಜಿಲ್ಲಾಸ್ಪತ್ರೆಗೆ ದಿಡೀರ್ ಭೇಟಿ ನೀಡುವ ಮೂಲಕ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು.

 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳಿಂದ ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದಾಗ, ಇಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು, ಸರಿಯಾದ ಸಮಯಕ್ಕೆ ವೈದ್ಯರು ತಪಾಸಣೆ ಮಾಡಿ ಅಗತ್ಯ ಸಲಹೆ ಸೂಚನೆ ನೀಡುವ ಮೂಲಕ ಔಷಧೋಪಾಚಾರ, ನಿಗದಿತ ಸಮಯದಂತೆ ಆಸ್ಪತ್ರೆಯಿಂದ ಆಹಾರ ಒದಗಿಸುತ್ತಾರೆ ಎಂದು ಮಾಹಿತಿ ನೀಡಿದರು.

 ಆಸ್ಪತ್ರೆಯ ಪ್ರತಿ ಹಂತದ ವಾರ್ಡ್ಗಳಲ್ಲಿಯೂ ದಾಖಲಾಗಿರುವ ರೋಗಿ ಹಾಗೂ ಅವರ ಸಂಬAಧಿಕರ ಆರೋಗ್ಯ ವಿಚಾರಿಸುತ್ತಾ,ಅಲ್ಲಿನ ಹೊರ ರೋಗಿಗಳ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ಒಳರೋಗಿ ಚಿಕಿತ್ಸಾ ವಿಭಾಗ ಪರಿಶೀಲನೆ ನಡೆಸಿ ಉತ್ತಮ ಚಿಕಿತ್ಸೆ, ಔಷಧ ಅಗತ್ಯ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಮಾಹಿತಿ ಮಾಹಿತಿ ಕ್ರೋಡಿಕರಿಸಿದರು.


 ಡೆಂಗ್ಯೂ ವಾರ್ಡ್ಗೆ ಭೇಟಿ ನೀಡಿ ಅಲ್ಲಿ ಒದಗಿಸಲಾಗಿತ್ತಿರುವÀ ಚಿಕಿತ್ಸಾ ಸೌಕರ್ಯಗಳ ಬಗ್ಗೆ, ಚಿಕ್ಕಮಕ್ಕಳ ತೀವ್ರ ನಿಗಾ ಘಟಕಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ ಪರೀಕ್ಷಿಸಿ ಯಾವುದೇ ಲೋಪವಾಗದಂತೆ ಮಕ್ಕಳ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಹೇಳಿದರು. ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ವಿಭಾಗಕ್ಕೆ ತೆರಳಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. 

 ಅದಲ್ಲದೆ ತಾಯಿಮಕ್ಕಳ ವಿಭಾಗ, ವಿಶೇಷ ನವಜಾತ ಶಿಶು ಆರೈಕೆ ಘಟಕ, ಪ್ರಸೂತಿ ಅವಲಂಬನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪ ಲೋಕಾಯುಕ್ತ ತಂಡದ ಇತರ ಸದಸ್ಯರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಕುರಿತು ಉಪ ಲೋಕಾಯುಕ್ತರಿಗೆ ವರದಿ ನೀಡಿದರು. ಆಸ್ಪತ್ರೆಯ ಸ್ವಚ್ಚತೆ ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆಗೆ ಆಧ್ಯತೆ ನೀಡುವಂತೆ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ ಅವರಿಗೆ ಸೂಚಿಸಿದರು.

ವಸತಿ ನಿಲಯಗಳಿಗೆ ಭೇಟಿ, ಪರಿಶೀಲನೆ: 

ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಅರಕೇರಿ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

 ಅಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು ಊಟದ ಕೋಣೆ, ಅಡುಗೆ ಕೋಣೆಯನ್ನು ಪರಿಶೀಲಿಸಿ ಸ್ವಚ್ಚತೆಗೆ ಆಧ್ಯತೆ ನೀಡಿ ಗುಣಮಟ್ಟದ ಆಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಶೌಚಾಲಯಗಳ ಸ್ವಚ್ಚತೆ, ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಬೆಡ್, ಹಾಸಿಗೆಗಳನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಹದಿನೈದು ದಿನಗಳ ಕಾಲ ಮಿತಿಯೊಳಗೆ ಇಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ನಂತರ ನಗರದ ಅಡವಿ ಶಂಕರಲಿAಗ ದೇವಸ್ಥಾನದ ಹತ್ತಿರ ಇರುವ ಮೆಟ್ರಿಕ್ ನಂತರದ ಬಾಲಕಿಯರ ಇಂಜನೀಯರ್ ಮತ್ತು ಮೆಡಿಕಲ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿz ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಈ ವಸತಿನಿಲಯದಲ್ಲಿ ಗ್ರಂಥಾಲಯ, ಕಂಪ್ಯೂಟರ್ ಕೋಣೆಯನ್ನು ಪರಿವೀಕ್ಷೀಸಿ ಅಲ್ಲಿದ್ದ ವಿದ್ಯಾರ್ಥಿನಿಯರಿಂದ ಊಟದ ವ್ಯವಸ್ಥೆ, ಇತರ ಸಮಸ್ಯೆಗಳ ಕುರಿತಾಗಿ ಕುಂದುಕೊರತೆಯನ್ನು ಆಲಿಸಿದರು. 

ವಿದ್ಯಾರ್ಥಿನಿಯರು ಇಲಾಖೆ ನಿಗದಿಪಡಿಸಿರುವ ಮೆನುವಿನ ಪ್ರಕಾರ ಊಟ ನೀಡುತ್ತಾರೆ ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರೊಂದಿಗೆ ಸಮಾಲೋಚಿಸಿದ ಉಪಲೋಕಾಯುಕ್ತರು, ಸ್ವಚ್ಚತೆ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿ, ನಿಯಮಿತವಾಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು. ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಹಾಗೂ ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು.

 ಊಟದ ಕೋಣೆಯನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಅಡುಗೆಗೆ ಬಳಸುವ ಸಾಮಗ್ರಿಗಳ, ಆಹಾರದ ಗುಣಮಟ್ಟದ ಬಗ್ಗೆ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಇದು ಸ್ವತಃ ತಮ್ಮದೇ ಮನೆಯೆಂದು ತಿಳಿದು ಅಡುಗೆ ಕೋಣೆಯ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಹೇಳಿ ಸಿಬ್ಬಂದಿಯ ಹಾಜರಾತಿ ದಾಖಲೆ ಹಾಗೂ ಸಂಬಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

 ವಸತಿ ನಿಲಯದ ಕಟ್ಟಡವನ್ನು ಸರಿಯಾಗಿ ನಿರ್ವಹಿಸಿಕೊಂಡು,ವಸತಿನಿಲಯದ ಸುತ್ತಮುತ್ತ ಸ್ವಚ್ಚತೆಗೆ ಆದ್ಯತೆ ನೀಡಿ, ಭದ್ರತಾ ದೃಷ್ಟಿಯಿಂದ ರಾತ್ರಿಯ ವೇಳೆ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ವಸತಿನಿಲಯದ ಸುತ್ತಲೂ ಕಂಪೌAಡ್ ಗೋಡೆ, ಅವರಣದಲ್ಲಿ ಬೀದಿ ದೀಪಗಳ ವ್ಯವಸ್ಥೆ ಒದಗಿಸಿ ಸುರಕ್ಷತೆಗೆ ಆಧ್ಯತೆ ನೀಡಿ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 ಈ ಸಂದರ್ಭ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹಿರಿಯ ಸಿವ್ಹಿಲ್ ನ್ಯಾಯಾಧೀಶರಾz ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ಲೋಕಾಯುಕ್ತ ಅಧಿಕ್ಷಕರಾದ ಟಿ.ಮಲ್ಲೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾÁಪೂರ ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಡಿವೈಎಸ್‌ಪಿ ಸುರೇಶ ರೆಡ್ಡಿ, ಇನಸ್ಪೆಕ್ಟರ್ ಆನಂದ ಟಕ್ಕಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, August 23, 2024

ಗಡಿ ಭಾಗದ ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯ ಒದಗಿಸಬೇಕು: ಬಿಜ್ಜರಗಿ



ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ಕನ್ನಡ ಶಾಲೆಗಳಿಗೆ ರಾಜ್ಯ ಸರ್ಕಾರ ಕನ್ನಡ ಭಾಷೆಯ ನಲಿಕಲಿ ಸಾಹಿತ್ಯವನ್ನು  ಒದಗಿಸಬೇಕು ಎಂದು ಯುವ ವಿಕಾಸ ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಬಿಜ್ಜರಗಿ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಹೊಂದಿಕೊಂಡಿರುವ ಮಹರಾಷ್ಟ್ರದ ಗಡಿಯಲ್ಲಿ ಅನೇಕ ಕನ್ನಡ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಕನ್ನಡದ ಶಾಲೆಗಳು ಕನ್ನಡ ಭಾಷೆ, ಸಾಹಿತ್ಯ ಸೇರಿದಂತೆ ಕನ್ನಡದ ಕಂಪನ್ನು ಮಹರಾಷ್ಟ್ರದ ನೆಲದಲ್ಲಿ ಪಸರಿಸುತ್ತಿವೆ. ಇನ್ನು ಕನ್ನಡ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಬಂದು ಕಲಿಯುತ್ತಿದ್ದಾರೆ. ಕನ್ನಡ ಶಾಲೆಗಳಿಗೆ ಮಹರಾಷ್ಟ್ರ ಸರ್ಕಾರ ಅನೇಕ ಸವಲತ್ತುಗಳನ್ನು ನೀಡಿದೆ. ಕನ್ನಡ ಶಾಲೆಗೆ ಉಚಿತ ಪುಸ್ತಕಗಳು, ನೋಟ ಬುಕ್ ಗಳು ಸೇರಿದಂತೆ ಪಠ್ಯಕ್ಕೆ ಬೇಕಾಗುವ ಉಪಕರಣಗಳನ್ನು ನೀಡುತ್ತಿದೆ. ಆದರೆ ನಲಿಕಲಿ ಸಾಹಿತ್ಯಗಳು ಮರಾಠಿಯಲ್ಲಿ ಒದಗಿಸಲಾಗಿದೆ. ಕಾರಣ ಕನ್ನಡದ ಕಂದಮ್ಮಗಳಿಗೆ ಅದನ್ನು ಕನ್ನಡದ ಶಿಕ್ಷಕರು ತರ್ಜುಮೆ ಮಾಡಿ ಹೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಕನ್ನಡದ ಪುಟಾಣಿ ಕಣ್ಮಣಿಗಳಿಗೆ ಅದನ್ನ ಅರ್ಥೈಸಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿದೆ. ಕಾರಣ ಗಡಿ ಭಾಗದ ಕನ್ನಡ ಶಾಲೆಗೆ ರಾಜ್ಯ ಸರ್ಕಾರ ನಲಿಕಲಿ ಕನ್ನಡದ ಸಾಹಿತ್ಯಗಳನ್ನು ಒದಗಿಸಬೇಕು. ಇದರಿಂದ ಕನ್ನಡದ ಕಂದಮ್ಮಗಳಿಗೆ ಅನುಕೂಲವಾಗಲಿದೆ ಎಂದರು.

ರಾಜ್ಯದ ಎಲ್ಲ ಗಡಿ ಭಾಗದ ಕನ್ನಡ ಶಾಲೆಗೆ ನಲಿಕಲಿ ಕನ್ನಡದ ಸಾಹಿತ್ಯಗಳನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ಯುವ ವಿಕಾಸ ಸಂಘದ ಸದಸ್ಯ ಪ್ರಕಾಶ ಮೇಟಿ, ಪ್ರವೀಣ ಕುರ್ಲೆ, ಸಚಿನ್ ಗದ್ಯಾಳ, ರಾಜಕುಮಾರ ಗೌಂಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Thursday, August 22, 2024

ಸಿಟಿಐ, ಸಿವಿಲ್ ಪಿಎಸ್'ಐ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು: ಯತ್ನಾಳ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: 245 ಸಿಟಿಐ ಮತ್ತು 545 ಸಿವಿಲ್ ಪಿಎಸ್'ಐ ಹುದ್ದೆಗಳ ನೇಮಕಾತಿ ಸೇರಿದಂತೆ ಈಗಾಗಲೇ ನಡೆದಿರುವ ಲಿಖಿತ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗ ಆದಷ್ಟು ಬೇಗ ಪ್ರಕಟಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಪಿಸಿ (ಸಿವಿಲ್, ಸಿಎಆರ್,ಡಿಎಆರ್) ಹುದ್ದೆಯಿಂದ ದೂರ ಉಳಿಯುತ್ತಾರೆ. ಇದರಿಂದ ಬೇರೆಯವರಿಗೂ ಅವಕಾಶ ಸಿಗುತ್ತದೆ ಹಾಗೂ ತೇರ್ಗಡೆಯಾದವರಿಗೆ ಮತ್ತೆ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ.

ಪಿಸಿ ಪರೀಕ್ಷೆಯ ಫಲಿತಾಂಶ ಮೊದಲು ಬಿಡುಗಡೆಯಾಗಿ, ನಂತರ ಪಿಎಸ್'ಐ ಆಗಿ ಎರಡರಲ್ಲೂ ತೇರ್ಗಡೆಯಾದವರು ಪಿಸಿ ಬಿಟ್ಟು ಪಿಎಸ್'ಐ ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮತ್ತೆ ಬ್ಯಾಕ್ಲಾಗ್ ಆಗಿ ಸರ್ಕಾರಕ್ಕೂ ಅಭ್ಯರ್ಥಿಗಳಿಗೂ ತೊಂದರೆಯಾಗುವುದು ಖಚಿತ. 

ಒಂದು ಉದ್ಯೋಗ ಸಿಗುವುದರಿಂದ ಒಂದು ಮನೆಗೆ ಸಾಕಷ್ಟು ಆರ್ಥಿಕ ನೆರವಾಗುತ್ತದೆ. ಅಭ್ಯರ್ಥಿಯ ಭವಿಷ್ಯ ಸಧೃಡವಾಗುತ್ತದೆ. ಪರೀಕ್ಷೆ ಫಲಿತಾಂಶದ ವಿಳಂಬ, ಅನಿಶ್ಚಿತತೆ, ಅವೈಜ್ಞಾನಿಕ ವೇಳಾಪಟ್ಟಿ, ಅಭ್ಯರ್ಥಿ ಇರುವ ಊರಿಂದ ಬೇರೆ ಊರಿಗೆ ಪರೀಕ್ಷೆ ಸೆಂಟರ್ ನಿಗದಿ ಮಾಡುವುದನ್ನು ಬಿಟ್ಟು ಪರೀಕ್ಷಾರ್ಥಿಗಳ ಪರ ಆಯೋಗ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.