Thursday, December 19, 2024

20-12-2024 EE DIVASA KANNADA DAILY NEWS PAPER

ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಡಿಸಿಗೆ ಮನವಿ

ವಿಜಯಪುರ : ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆAದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಆಡುಗೆಯವರು ಇರಲೇಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ 6000 ರೂ ಗಳ ಗೌರವಧನ ಹೆಚ್ಚಿಸಬೇಕು. ಈಗಾಗಲೇ ಹಣಕಾಸು ಇಲಾಖೆ ಒಪ್ಪಿಕೊಂಡಿರುವ ನಿವೃತ್ತಿಯಾದವರಿಗೆ ಇಡಿಗಂಟು ಕೂಡಲೇ ಜಾರಿ ಆಗಬೇಕು. ಸಾದಿಲ್ವಾರು ಜಂಟಿಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ Sಆಒಅ ಗೆ ವರ್ಗಾವಣೆ ಮಾಡಿರುವ ಕ್ರಮ ವಾಪಾಸ್ಸಾಗಬೇಕು ಸಾದಿಲ್ವಾರು ಖಾತೆ ಮೊದಲಿನಂತೆಯೇ ಬದಲಾಯಿಸಬೇಕು. ಆಡುಗೆ ಕೇಂದ್ರಗಳು ಸುಸಜ್ಜಿತವಾಗಿ ಇಲ್ಲದ ಕಡೆ ಉತ್ತಮ ಅಡುಗೆ ಕೇಂದ್ರಗಳನ್ನು ನಿರ್ಮಿಸಬೇಕು. ಹಾಗೂ ಕ್ರಿಮಿ ಕೀಟಗಳು ಬರದ ರೀತಿಯಲ್ಲಿ ಅಡುಗೆ ಕೇಂದ್ರಗಳ ಸುತ್ತ ಮುತ್ತ ಸೂಕ್ತ ವಾತಾವರಣ ಸೃಷ್ಟಿಸಬೇಕು. ಉತ್ತರಪ್ರದೇಶ ಮತ್ತು ಪಂಜಾಬ ರಾಜ್ಯದ ಮಾನ್ಯ ಹೈಕೊರ್ಟ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸ ಮತ್ತು ಕನಿಷ್ಠ ಕೂಲಿ ಜಾರಿ ಆಗಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಈಳಗೇರ ಮಾತನಾಡಿ, 2014 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರಸರ್ಕಾರವು 26,000 ರೂ ಗಳಿಗೆ ಗೌರವಧನ ಹೆಚ್ಚಿಸಬೇಕು. ಒಆಒ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಕ್ಲಸ್ಟರ್ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಜಿಲ್ಲೆಯಲ್ಲಿ ಮಾಡಬೇಕು. ಕೆಲಸದ ಅವಧಿಯನ್ನು 4 ಗಂಟೆಯಿAದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂಗಳ ಪರಿಹಾರ ಕೊಡಬೇಕು. ಮಾರ್ಚ್ 31. 2024 ಕೈ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರೀಲ್ 10, 2024ಕ್ಕೆ ಮರು ಆದೇಶ ನೀಡಬೇಕು. ಬಜೆಟ್ ನಲ್ಲಿ ಈ ನೌಕರರಿಗೆ ಹೆಚ್ಚಳ ಮಾಡಿದ ರೂ 1000/- ವೇತನವನ್ನು ಜನವರಿ 2023 ರಿಂದ ಅನ್ವಯಿಸಿ ಜಾರಿಮಾಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಎಂದರು.

ಜನಪರವಾಗಿ ಈ ರಾಜ್ಯದ ಅಭಿವೃದ್ದಿಗಾಗಿ ಎಲ್ಲಾ ವರ್ಗದ ಜನರಿಗೆ ನ್ಯಾಯ ನೀಡುವ ಹೊಸ ಭರವಸೆ ನೀಡಲು ಬಂದಿರುವ ಮಾನ್ಯ ಸಿದ್ದರಾಮಯ್ಯನವರ ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ 1 ಲಕ್ಷ 18 ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆAದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ, ಖಜಾಚಿ ಸುವರ್ಣಾ ರಾಠೋಡ, ಉಪಾಧ್ಯಕ್ಷರಾದ ಬಿಸ್ಮಿಲ್ಲಾ ಇನಾಮದಾರ, ಉಪಾಧ್ಯಕ್ಷರಾದ ಸುರೇಖಾ ವಾಘಮೋಡೆ, ಜಯಶ್ರೀ ಪಾರ್ಥಗೋಳ, ಸುಜಾತಾ ಚಿಂಚೋಳಿ, ಶೈಲಾ ಮಾಳಗೆ, ಸುಮಿತ್ರಾ, ರಾಜಶ್ರೀ ಹತ್ತಿ, ಭಾರತಿ ಮಧಭಾವಿ, ಸುಭದ್ರಾ ತಿಳಗೂಳ, ರೇಣುಕಾ ಸುಣಗಾರ, ಮೀನಾಕ್ಷಿ ಶಿಂಧೆ, ರೇಣುಕಾ ಮುತ್ತಗಿ, ವಿಜಯಾ ಬಾಬರ, ದೇವುಬಾಯಿ ನಾಯಕ, ಅನ್ನಪೂರ್ಣಾ ಲೋಗಾಂವಿ, ಶಾಂತಾ ಹಿರೇಮಠ,ಸೈನಾಜ ಸೌಧಾಗರ, ದಾನಮ್ಮ ಹೊನ್ನುಟಗಿ, ನೂರಜಾನ ಕೆಂಭಾವಿ, ಅಂಬಕ್ಕ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 17, 2024

ವಿಜಯಪುರ RED ಅಲರ್ಟ್

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ 8.5 ಡಿಗ್ರಿ ಸೆಲ್ಸಿಯಸ್ ಇದ್ದ ಉಷ್ಣಾಂಶ, ಮಂಗಳವಾರ 8 ಡಿಗ್ರಿಗೆ ಕುಸಿಯುವ ಮೂಲಕ, ಜಿಲ್ಲೆಯನ್ನು ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಧ್ರುವದಿಂದ ಶೀತ ಗಾಳಿ ಬೀಸುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಚಳಿ ಹೆಚ್ಚಾಗುತ್ತಿದ್ದು, ಕಳೆದ ಎರಡು ದಿನದಿಂದ ಉಷ್ಣಾಂಶದಲ್ಲಿ ಭಾರಿ ಇಳಿತ ಕಂಡಿದೆ.

ಮೈಕೊರೆಯುವ ಚಳಿಗೆ ಜಿಲ್ಲೆಯ ಜನರು ನಲಗುವಂತಾಗಿದೆ.

ಅಲ್ಲದೆ ಡಿ. 18 ರಂದು ಕನಿಷ್ಠ ತಾಪಮಾನ 6 ರಿಂದ 7 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ವಿಜ್ಞಾನಿ ತಿಳಿಸಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

18-12-2024 EE DIVASA KANNADA DAILY NEWS PAPER

ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳ ಆಗ್ರಹಿಸಿ ಅಹೋರಾತ್ರಿ ಧರಣಿ ಮುಷ್ಕರ

ವಿಜಯಪುರ : ಕರ್ನಾಟಕ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಸಂಯೋಜಿತ ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಮುಂಭಾಗ ಮಂಗಳವಾರ ಅಹೋರಾತ್ರಿ ಧರಣಿ ಮುಷ್ಕರ ಹಮ್ಮಿಕೊಂಡಿದ್ದರು.

ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಮುಷ್ಕರ ನಿರತ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು.

ಮುಷ್ಕರ ಬೆಂಬಲಿಸಿ ಸಿಐಟಿಯು ಅಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ಈ ಸಂದರ್ಭದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ, ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ. ಮತ್ತು 2013ರ ಆಹಾರ ಭದ್ರತಾ ಕಾಯ್ದೆ, 2009ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ಗಳು ಇವರನ್ನು 3 ಮತ್ತು 4 ಗ್ರೇಡ್‌ನ ನೌಕರರನ್ನಾಗಿ ಪರಿಗಣಿಸಲು ಜಂಟೀ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದೂ ತೀರ್ಪು ನೀಡಿದೆ ಮತ್ತು ಸುಪ್ರೀಂ ಕೋರ್ಟ್ 1972 ಗ್ರಾಜ್ಯುಟಿ ಪಾವತಿ ಕಾಯ್ದೆಯಡಿ ಅರ್ಹರೆಂದೂ ತೀರ್ಪು ನೀಡಿದೆ. ದೇಶದ ಅಭಿವೃದ್ಧಿಗೆ ಪೂರಕವಾದ ಮಾನವ ಸಂಪನ್ಮೂಲಗಳನ್ನು ಅಪೌಷ್ಠಿಕತೆ, ಅಂಗವೈಕಲ್ಯತೆಗಳಿAದ ಕಾಪಾಡಿ ಮಾನಸಿಕ ಮತ್ತು ದೈಹಿಕವಾಗಿ ಬೆಳಿಸಿ ಮಾನವ ಸಮಾಜದ ಪುನರುತ್ಪಾದನೆಗೆ ಕೊಡುಗೆ ಕೊಡುತ್ತಿರುವ IಅಆSನ್ನು ಯೋಜನೆಯನ್ನಾಗಿಯೇ 49 ವರ್ಷಗಳ ನಂತರವೂ ಉಳಿಸಿಕೊಳ್ಳಲಾಗಿದೆ. ಮಾತ್ರವಲ್ಲದೇ 2014ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ ನೀತಿ ಆಯೋಗದ ಶಿಫಾರಸ್ಸುಗಳಂತೆ 60:40ರ ಅನುಪಾತದ ಆಧಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಾಬ್ದಾರಿಯಿಂದ ನುಣಿಚಿಕೊಂಡು ಬಜೆಟ್ ಅನುದಾನಗಳನ್ನು ನಿರಂತರವಾಗಿ ಕಡಿಮೆ ಮಾಡುತ್ತಿದೆ. ಅಂಗನವಾಡಿ ಮಕ್ಕಳಿಗೆ ಕೊಡುವ ಪೌಷ್ಠಿಕ ಆಹಾರದ ಘಟಕವೆಚ್ಚ 2018ರಿಂದ ಹೆಚ್ಚಳ ಮಾಡದೇ ಉSಖಿಯನ್ನು ಹಾಕಿದ್ದರಿಂದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಕೊಡುವುದರಲ್ಲಿ ವೈಫಲ್ಯತೆ ಎದ್ದು ಕಾಣುತ್ತಿದೆ. ಮತ್ತು ಅಂಗನವಾಡಿ ನೌಕರರ ವೇತನವನ್ನು ಕೂಡಾ ಹೆಚ್ಚಳ ಮಾಡದೇ ಹೊಸ ಆಕರ್ಷಕ ಘೋಷಣೆಗಳಿಗೆ ಮಾತ್ರವೇ ಸೀಮಿತವಾಗುತ್ತಿದೆ ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷö್ಮಣ ಹಂದ್ರಾಳ, ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ. ಆದರೆ ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆಗೊಳಿಸಿ, ಇದರ ಮೇಲ್ವಿಚಾರಣೆಗೆ IಅಆS ಪ್ರತ್ಯೇಕ ನಿರ್ದೆಶನಾಲಯ ಮಾಡಿದರೆ ಮಾತ್ರವೇ ಈ ತೀರ್ಮಾನಗಳನ್ನು ಪುಷ್ಟೀಕರಿಸಿದಂತಾಗುತ್ತದೆ ಎಂದರು.

ಅAಗನವಾಡಿ ನೌಕರರೆ ಸಂಘದ ಜಿಲ್ಲಾ ಅಧ್ಯಕ್ಷರಾದ ಸುನಂದಾ ನಾಯಕ, 1948 ರ ಕನಿಷ್ಟ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ 4 ಗಂಟೆಗಿAತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಠ ವೇತನ ನೀಡಬೇಕು ಎಂದೂ ತಿಳಿಸಿದೆ. ಆದರೆ ಯಾವುದೇ ಸರ್ಕಾರಗಳು ಇದನ್ನು ಜಾರಿ ಮಾಡಲು ಮುಂದಾಗಲಿಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ತನ್ನ ಪ್ರಚಾರದಲ್ಲಿ ಹೇಳಿದಂತೆ 3500 ರೂ ಮತ್ತು 1750 ರೂ. ವೇತನ ಹೆಚ್ಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲಾ ಗೌರವಾಧ್ಯಕ್ಷರು ಭಾರತಿ ವಾಲಿ ಮಾತನಾಡಿ, ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರಗಳ ಬಾಡಿಗೆ ಹಣ ಪ್ರತಿ ತಿಂಗಳ ತೆಗೆಯಬೇಕು. ಗ್ಯಾಸ್ ಸಿಲಿಂಡರ್ ಹಣ ಖಾತೆಗೆ ಹಾಕುವ ಬದಲು ನೇರವಾಗಿ ಸಿಲಿಂಡರ್ ಗಳು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು. ಮೊಟ್ಟೆ ಹಣ ಬೆಲೆ ಏರಿಕೆ ಅನುಸಾರವಾಗಿ ಬಿಲ್ ಜಮಾ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಪ್ರತಿ ತಿಂಗಳ ಸರಿಯಾಗಿ ಹಾಲಿನ ಪೌಡರ್ ಬರುವಂತೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಬಿ ಎಲ್ ಓ ಕೆಲಸದಿಂದ ಕೈಬಿಡಬೇಕು ಶಾಲಾ ಪೂರ್ವ ಶಿಕ್ಷಣ ನೆಡೆಸಲು ತೊಂದರೆ ಆಗುತ್ತದೆ. ಮಿನಿ ಅಂಗನವಾಡಿ ಕಾರ್ಯಕರ್ತರಿಗೆ ಅಪ್ಗ್ರೇಡೆಶನ್ ಆದೇಶ ಕೊಡಬೇಕು. ಅಂಗನವಾಡಿ ನೌಕರ ಗೌರವಧನ ಪ್ರತಿ ತಿಂಗಳಾಗಬೇಕು ಹಾಗೂ ಗೌರವಧನ ಪಡೆಯುವ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅನುವು ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಟಿಎ ಮತ್ತು ಡಿಎ ಬೆಲೆ ಏರಿಕೆ ಅನುಸಾರವಾಗಿ ಹೆಚ್ಚಳ ಮಾಡಬೇಕು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ ಮಾತನಾಡಿದರು. ಈ ಸಂದರ್ಭದಲ್ಲಿ ಸುರೇಶ ಜೀಬಿ, ರೈತ ಮುಖಂಡರಾದ ಭೀಮರಾಯ ಪೂಜಾರಿ, ಜಿಲ್ಲಾ ಖಜಾಂಚಿ ಪ್ರತಿಭಾ ಕುರಡೆ, ಸಿಂದಗಿ ತಾಲೂಕಾಧ್ಯಕ್ಷರಾದ ಸರಸ್ವತಿ ಮಠ, ವಿಜಯಪು ತಾಲೂಕಾ ಕಾರ್ಯದರ್ಶಿ ಸುವರ್ಣಾ ಹಲಗಲಿ, ಇಂಡಿ ತಾಲೂಕಾ ಕಾರ್ಯದರ್ಶಿ ಗಿರೀಜಾ ಸಕ್ರಿ, ಚಡಚಣ ತಾಲೂಕಾ ಕಾರ್ಯದರ್ಶಿ ಶೋಭಾ ಕಬಾಡೆ, ಬ.ಬಾಗೇವಾಡಿ ತಾಲೂಕಾ ಅಧ್ಯಕ್ಷರಾದ ವಿಜಯಲಕ್ಷಿö್ಮÃ ಹಿಪ್ಪರಗಿ, ಬ.ಬಾಗೇವಾಡಿ ಕಾರ್ಯದರ್ಶಿ ಚೌಡಮ್ಮ ಕಡಕೋಳಕರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.