Friday, December 20, 2024

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ಮಂಡ್ಯ ಡಿ.20 (ಕರ್ನಾಟಕ ವಾರ್ತೆ) 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ

ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. 


  ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.


ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.  ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು. 


ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು. 



*ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ*


ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.


ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.


 ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.


 ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ. 

 ಮಂಡ್ಯ ನಗರದಲ್ಲಿ  ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.

 ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, December 19, 2024

ಮಂಡ್ಯದಲ್ಲಿ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ


 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ  ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ  ನೆರವೇರಿಸಿದರೆ,

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ  ನಾಡೋಜ ಡಾ ಮಹೇಶ್ ಜೋಶಿ  ಪರಿಷತ್ತಿನ ಧ್ವಜ ಹಾಗೂ  ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯನಾಡ ಧ್ವಜಾರೋಹಣ ಮಾಡಿದರು.



ಸಮ್ಮೇಳನದ ಸೃವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ,ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ , ಶಾಕರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ


 ಈ ದಿವಸ ಕನ್ನಡ ದಿನ ಪತ್ರಿಕ ವಾರ್ತೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ನಗರದ ಸಂಜಯ ವೃತ್ತದಲ್ಲಿ ಚಾಲನೆ ನೀಡಿದರು.


ಶಾಸಕರುಗಳಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮೂಢಾ ಅಧ್ಯಕ್ಷ ನಹೀಮ್, ಜಿಲ್ಲಾಧ್ಯಕ್ಷ ಚಿದಂಬರಂ, ಮೈಶುಗರ್ ಕಂಪನಿ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ದಸರಾದ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ರಸ್ತೆಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

20-12-2024 EE DIVASA KANNADA DAILY NEWS PAPER

ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಡಿಸಿಗೆ ಮನವಿ

ವಿಜಯಪುರ : ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆAದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಆಡುಗೆಯವರು ಇರಲೇಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ 6000 ರೂ ಗಳ ಗೌರವಧನ ಹೆಚ್ಚಿಸಬೇಕು. ಈಗಾಗಲೇ ಹಣಕಾಸು ಇಲಾಖೆ ಒಪ್ಪಿಕೊಂಡಿರುವ ನಿವೃತ್ತಿಯಾದವರಿಗೆ ಇಡಿಗಂಟು ಕೂಡಲೇ ಜಾರಿ ಆಗಬೇಕು. ಸಾದಿಲ್ವಾರು ಜಂಟಿಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ Sಆಒಅ ಗೆ ವರ್ಗಾವಣೆ ಮಾಡಿರುವ ಕ್ರಮ ವಾಪಾಸ್ಸಾಗಬೇಕು ಸಾದಿಲ್ವಾರು ಖಾತೆ ಮೊದಲಿನಂತೆಯೇ ಬದಲಾಯಿಸಬೇಕು. ಆಡುಗೆ ಕೇಂದ್ರಗಳು ಸುಸಜ್ಜಿತವಾಗಿ ಇಲ್ಲದ ಕಡೆ ಉತ್ತಮ ಅಡುಗೆ ಕೇಂದ್ರಗಳನ್ನು ನಿರ್ಮಿಸಬೇಕು. ಹಾಗೂ ಕ್ರಿಮಿ ಕೀಟಗಳು ಬರದ ರೀತಿಯಲ್ಲಿ ಅಡುಗೆ ಕೇಂದ್ರಗಳ ಸುತ್ತ ಮುತ್ತ ಸೂಕ್ತ ವಾತಾವರಣ ಸೃಷ್ಟಿಸಬೇಕು. ಉತ್ತರಪ್ರದೇಶ ಮತ್ತು ಪಂಜಾಬ ರಾಜ್ಯದ ಮಾನ್ಯ ಹೈಕೊರ್ಟ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸ ಮತ್ತು ಕನಿಷ್ಠ ಕೂಲಿ ಜಾರಿ ಆಗಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಈಳಗೇರ ಮಾತನಾಡಿ, 2014 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರಸರ್ಕಾರವು 26,000 ರೂ ಗಳಿಗೆ ಗೌರವಧನ ಹೆಚ್ಚಿಸಬೇಕು. ಒಆಒ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಕ್ಲಸ್ಟರ್ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಜಿಲ್ಲೆಯಲ್ಲಿ ಮಾಡಬೇಕು. ಕೆಲಸದ ಅವಧಿಯನ್ನು 4 ಗಂಟೆಯಿAದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂಗಳ ಪರಿಹಾರ ಕೊಡಬೇಕು. ಮಾರ್ಚ್ 31. 2024 ಕೈ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರೀಲ್ 10, 2024ಕ್ಕೆ ಮರು ಆದೇಶ ನೀಡಬೇಕು. ಬಜೆಟ್ ನಲ್ಲಿ ಈ ನೌಕರರಿಗೆ ಹೆಚ್ಚಳ ಮಾಡಿದ ರೂ 1000/- ವೇತನವನ್ನು ಜನವರಿ 2023 ರಿಂದ ಅನ್ವಯಿಸಿ ಜಾರಿಮಾಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಎಂದರು.

ಜನಪರವಾಗಿ ಈ ರಾಜ್ಯದ ಅಭಿವೃದ್ದಿಗಾಗಿ ಎಲ್ಲಾ ವರ್ಗದ ಜನರಿಗೆ ನ್ಯಾಯ ನೀಡುವ ಹೊಸ ಭರವಸೆ ನೀಡಲು ಬಂದಿರುವ ಮಾನ್ಯ ಸಿದ್ದರಾಮಯ್ಯನವರ ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ 1 ಲಕ್ಷ 18 ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆAದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ, ಖಜಾಚಿ ಸುವರ್ಣಾ ರಾಠೋಡ, ಉಪಾಧ್ಯಕ್ಷರಾದ ಬಿಸ್ಮಿಲ್ಲಾ ಇನಾಮದಾರ, ಉಪಾಧ್ಯಕ್ಷರಾದ ಸುರೇಖಾ ವಾಘಮೋಡೆ, ಜಯಶ್ರೀ ಪಾರ್ಥಗೋಳ, ಸುಜಾತಾ ಚಿಂಚೋಳಿ, ಶೈಲಾ ಮಾಳಗೆ, ಸುಮಿತ್ರಾ, ರಾಜಶ್ರೀ ಹತ್ತಿ, ಭಾರತಿ ಮಧಭಾವಿ, ಸುಭದ್ರಾ ತಿಳಗೂಳ, ರೇಣುಕಾ ಸುಣಗಾರ, ಮೀನಾಕ್ಷಿ ಶಿಂಧೆ, ರೇಣುಕಾ ಮುತ್ತಗಿ, ವಿಜಯಾ ಬಾಬರ, ದೇವುಬಾಯಿ ನಾಯಕ, ಅನ್ನಪೂರ್ಣಾ ಲೋಗಾಂವಿ, ಶಾಂತಾ ಹಿರೇಮಠ,ಸೈನಾಜ ಸೌಧಾಗರ, ದಾನಮ್ಮ ಹೊನ್ನುಟಗಿ, ನೂರಜಾನ ಕೆಂಭಾವಿ, ಅಂಬಕ್ಕ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.