Wednesday, July 23, 2025

ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಗೆ ಸೇರಿಸಲು ಜಯ ಕರ್ನಾಟಕ ರಕ್ಷಣಾ ಸೇನೆ ಆಗ್ರಹ



ವಿಜಯಪುರ: ಜಿಲ್ಲೆಯನ್ನು 371ಜೆ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೆನೆಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ಜಿಲ್ಲೆಗೆ ಆದ ಐತಿಹಾಸಿಕ ಅನ್ಯಾಯ ಸರಿಪಡಿಸಲು 371ಜೆ ಮೀಸಲಾತಿ ಒದಗಿಸುವುದಾಗಿ ಪಕ್ಷದವರು ಹಾಗೂ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಗೆ ಸೇರಿಸಬೇಕು. ವಿಜಯಪುರ ಜಿಲ್ಲೆಯು ಅತಿ ಹಿಂದುಳಿದ ಪ್ರದೇಶವಾಗಿದೆ. ಮೀಸಲಾತಿ ವಿರೋಧಿಸಿದ ಪಕ್ಷ ಮತ್ತು ಮುಖಂಡರು ಯುವ ಜನರ ಮತ ಪಡೆಯುವಗೋಸ್ಕರ 371 ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾವೊಬ್ಬ ಜನಪ್ರತಿನಿಧಿಗಳು ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿ ಒದಗಿಸುವ ಪಯತ್ನ ಮಾಡದೇ ಇರವುದು ದುರಂತದ ಸಂಗತಿ. ಪದೇ ಪದೇ ಸುಳ್ಳು ಭರವಸೆಗಳನ್ನು ರಾಜಕಾರಣಿಗಳು ನೀಡಿ ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ. ಇಂದಿಗೆ ಮೀಸಲಾತಿ ಜಾರಿಯಾಗಿ 10 ವರ್ಷ ಗತಿಸಿವೆ. ಜಿಲ್ಲೆಯು ಅಭಿವೃದ್ಧಿಯಿಂದ ಹತ್ತು ವರ್ಷ ವಂಚಿತವಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯ ಉಪಾಧ್ಯಕ್ಷರಾದ ಮಂಜುಳಾ ವಾಲಿ ಮಾತನಾಡಿ, ವಿಜಯಪುರ ಜಿಲ್ಲೆಯು 371 ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಕಲಬುರಗಿ ಉಚ್ಛ ನ್ಯಾಯಾಲಯ ಪೀಠದ ಆಧೀನದಲ್ಲಿ ಜಿಲ್ಲೆಯು ಒಳಪಟ್ಟಿದೆ. ಕೂಡಲೇ ವಿಜಯಪುರ ಜಿಲ್ಲೆಯನ್ನು ಬಿಟ್ಟು ಹೋದ ಪ್ರದೇಶವೆಂದು ಪರಿಗಣಿಸಿ 371ಜೆ ಮೀಸಲಾತಿ ಅಡಿ ಸೇರಿಸಿ ಈ ಭಾಗದ ಪ್ರತಿಯೊಬ್ಬ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗಳವೆ, ಜಿಲ್ಲಾಧ್ಯಕ್ಷರಾದ ವಾಣೀಶ್ರೀ ಪಟ್ಟಣಶೆಟ್ಟಿ, ಬಸವನ ಬಾಗೇವಾಡಿ ತಾಲೂಕಾಧ್ಯಕ್ಷರಾದ ಸಿದ್ದಮ್ಮ ಹೇರೂರ, ಜಿಲ್ಲಾ ಉಪಾಧ್ಯಕ್ಷರಾದ ಸಮಿತ್ರಾ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಜಿಲ್ಲಾ ಕಾನೂನು ಸಲಹೆಗಾರರಾದ ಉತ್ತಮ ಹೊಸಮನಿ, ವಿಜಯಪುರ ತಾಲೂಕಾಧ್ಯಕ್ಷರಾದ ವಿಠ್ಠಲ ತಳವಾರ, ಜಿಲ್ಲಾ ಮುಖಂಡರಾದ ಸಕಾರಾಮ ಪವಾರ, ಜಿಲ್ಲಾ ಮುಖಂಡರಾದ ರಾಜು ಕೋಟ್ಯಾಳ, ಕೇಧಾರನಾಥ ರಜಪೂತ,ಶಂಕರಗೌಡ ಬಿರಾದಾರ, ಮಹಾದೇವ ಢಗೆ, ರಾಜು ಬಿಸೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, July 22, 2025

ವಿಡಿಸಿಸಿ ಬ್ಯಾಂಕ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಗಜಾನನ ಉತ್ಸವ ಮಂಡಳಿಯಿಂದ ಗಣೇಶ ಚತುರ್ಥಿ ಅಂಗವಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ನಗರದ ರೂಪಾದೇವಿ ಶಾಲಾ ಪರಿಸರದ ಬಳಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಚಾಲನೆ ನೀಡಿದರೆ, ನಿರ್ದೇಶಕರಾದ ಜಿ.ಬಿ. ನಿಡೋಣಿ ಕ್ರಿಕೆಟ್ ಕ್ರೀಡೆಗೆ ಟಾಸ್ ಮಾಡಿದರು.

ನಿರ್ದೇಶಕರಾದ ಹನುಮಂತ್ರಾಯಗೌಡ ಪಾಟೀಲ ಪುಷ್ಪ ಗುಚ್ಚಗಳನ್ನು ನೀಡುವ ಮೂಲಕ ಕ್ರೀಡಾಪಟುಗಳಿಗೆ ಶುಭಕೋರಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ ಅವರು ಕ್ರೀಡಾ ಸಾಮಗ್ರಿ ಬಿಡುಗಡೆ ಮಾಡಿದರು.

ಬ್ಯಾಂಕ್ ಅಧಿಕಾರಿಗಳಾದ ಸತೀಶ ಡಿ. ಪಾಟೀಲ, ಪಿ.ವೈ.ಡೆಂಗಿ, ಎಂ.ಜಿ.ಬಿರಾದಾರ, ಎಂ.ಎಚ್.ಹಟ್ಟಿ, ಎಂ.ಎಸ್.ದೇಸಾಯಿ, ಎಸ್.ಬಿ.ಹೊಸಮನಿ, ಬಿ.ಎಸ್.ಪಾಟೀಲ, ಐ.ಎಸ್.ಸಂಖ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಆರ್.ಪಿ. ಪವಾರ ಸ್ವಾಗತಿಸಿದರೆ, ಸಂತೋಷ ಮಾನಕರ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಣೇಶ ಹಬ್ಬ : ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಕುರಿತು ಜುಲೈ 25ರಂದು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಭೆ

 ವಿಜಯಪುರ  : ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಆಚರಿಸಲಾಗುವ ಗೌರಿ ಗಣೇಶ ಚತುರ್ಥಿ ಉತ್ಸವದಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಜೇಡಿ-ಇತರೆ ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದು ಹಾಗೂ ವಿಗ್ರಹಗಳನ್ನು ಪಾಲಿಕೆಯಿಂದ ನಿರ್ಮಿಸಲಾದ ಕೃತಕ ಹೊಂಡಗಳು, ಸಂಚಾರಿ ಗಣೇಶ ವಿಸರ್ಜನಾ ವಾಹನಗಳಲ್ಲಿ ವಿಸರ್ಜಿಸುವ ಕುರಿತು ದಿನಾಂಕ : 25-07-2025 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಸಭಾಭವನದಲ್ಲಿ ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ. 

 ಈ ಸಭೆಗೆ ಸಾರ್ವಜನಿಕರು, ಪ್ರತಿನಿಧಿಗಳು, ಗಣೇಶ ಮಹಾಮಂಡಳಿ ಮತ್ತು ಮಂಡಳಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣೇಶ ವಿಗ್ರಹ ಮಾರಾಟಗಾರರು ಹಾಗೂ ಸಂಘ-ಸAಸ್ಥೆಗಳು ಭಾಗವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Monday, July 21, 2025

ಮೃತ ಗದಿಗೆಪ್ಪ ಕುಟುಂಬಕ್ಕೆ ಸಚಿವ ಪಾಟೀಲ ಲಕ್ಷ ರೂ. ವಯಕ್ತಿಕ ನೆರವು

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಹಾವೇರಿ : ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಗೋಡೆ ಕುಸಿದು ಮೃತಪಟ್ಟಿದ್ದ ರೈತ ಗದಿಗೆಪ್ಪ ಕೊಪ್ಪದ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ವೈಯಕ್ತಿಕವಾಗಿ 1 ಲಕ್ಷ ರೂ. ಆರ್ಥಿಕ ನೆರವು ವಿತರಿಸಿದರು.

ಸೋಮವಾರ ಹಾವೇರಿ ನಗರದಲ್ಲಿ ಜರುಗಿದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮೃತ ಗದಿಗೆಪ್ಪ ಅವರ ಪುತ್ರ ಮೂಕೇಶ ಕೊಪ್ಪದ ಅವರನ್ನು ಕರೆಸಿ 1 ಲಕ್ಷ ರೂ. ನಗದು ಪರಿಹಾರವನ್ನು ಹಸ್ತಾಂತರಿಸಿದರು.

ಇದೇ ವೇಳೆ ಶಾಸಕರಾದ ಬಸವರಾಜ ಶಿವಣ್ಣವರ, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ  ರುಚಿರಾ ಬಿಂದು, ಎಸ್ಪಿ ಯಶೋಧಾ ವಂಟಗೋಡಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಂಜೀವ ನೀರಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.