Wednesday, January 14, 2026

ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

ವಿಜಯಪುರ : ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. 

ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಜಾನುವಾರ ಜಾತ್ರೆ ಆಯೋಜಿಸಲಾಗುತ್ತಿದ್ದು, ಇದೇ ಜ.10 ರಿಂದ ಆರಂಭಗೊAಡಿದ್ದು, ಈ ಸಂದರ್ಭ ಯಾವುದೇ ಸಮಸ್ಯೆಯುಂಟಾಗದAತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದನ್ನು ಹಾಗೂ ಜಾತ್ರೆಗೆ ಆಗಮಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು ಪಶುವೈದ್ಯಾಧಿಕಾರಿಗಳು ಜಾತ್ರೆಯ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು.

ಆAಬುಲೆನ್ಸ್, ವೈದ್ಯಕೀಯ ಸೌಲಭ್ಯ ಸೇರಿದಂತೆ ಯಾವುದೇ ಕೊರತೆ ಉಂಟಾಗದAತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನಡೆದಿರುವ ಜಾನುವಾರುಗಳ ಬಹುಮಾನ ಆಯ್ಕೆ ಮಾನದಂಡಗಳAತೆ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು. ಈ ಬಾರಿ ಜಾತ್ರೆಗೆ ಸುಮಾರು ಐದು ಸಾವಿರ ಜಾನುವಾರಗಳು ಆಗಮಿಸಿದ್ದು, ಅವುಗಳ ಪೈಕಿ ಈವರೆಗೆ 1500 ಜಾನುವಾರುಗಳು ಮಾರಾಟವಾಗಿರುವ ಹಾಗೂ ಬಹುಮಾನ ವಿತರಣೆ ಕುರಿತ ಮಾಹಿತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಮಾಹಿತಿ ನೀಡಿದರು. 

ಈ ಸಂದರ್ಭ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಕ್ಕಪಡೆ ಯೋಜನೆಗೆ ಸಂಚಾರಿ ವಾಹನಕ್ಕೆ ಚಾಲನೆ ಮಹಿಳೆ–ಮಕ್ಕಳ ಸುರಕ್ಷತೆಗಾಗಿ ವಿನೂತನ ಕ್ರಮ


ವಿಜಯಪುರ:  ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಡಿ.22 ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ ಹಾಗೂ ಅಶೋಕ ಮನಗೂಳಿ, ಸಂಸದರಾದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಈ ಸಂದರ್ಭದಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷö್ಮಣ ನಿಂಬರಗಿ ಅವರು ಜ.14ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಅಕ್ಕಪಡೆ ಯೋಜನೆಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿ, ಅಕ್ಕಪಡೆ ಯೋಜನೆಯು ರಾಜ್ಯಾದ್ಯಂತ ಅನುಷ್ಠಾನಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಅಕ್ಕಪಡೆ ಸಿಬ್ಬಂದಿಗಳು ಎರಡು ಪಾಳಿಯಲ್ಲಿ (ಶಿಪ್ಟ್) ಕಾರ್ಯನಿರ್ವಹಿಸುತ್ತಿದ್ದು, ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯದ ಸಂದರ್ಭದಲ್ಲಿ ತಕ್ಷಣ ರಕ್ಷಣೆ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಮುಖ್ಯಮಂತ್ರಿಗಳು ಈ ವಿನೂತನ ಯೋಜನೆಗೆ ಈಗಾಗಲೇ ರಾಜ್ಯದಾದ್ಯಂತ ಚಾಲನೆ ನೀಡಿರುತ್ತಾರೆ ಎಂದು ಹೇಳಿದರು.

 ಸಹಾನುಭೂತಿ ಮತ್ತು ಸಮುದಾಯ ಸೇವೆಯ ಆಶಯದೊಂದಿಗೆ ಕಾರ್ಯನಿರ್ವಹಿಸುವ ಅಕ್ಕಪಡೆ, ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿಯೂ ಶೈಕ್ಷಣಿಕ ಶಕ್ತಿಯಾಗಿಯೂ ಕೆಲಸ ಮಾಡಲಿದೆ. ಶಾಲೆ ಮತ್ತು ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು, ಶಿಕ್ಷಣದ ಮಹತ್ವ, ಆತ್ಮವಿಶ್ವಾಸ, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ, ವಿವಿಧ ಸಹಾಯವಾಣಿ ಸೇವೆಗಳು ಹಾಗೂ ಇತರೆ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಇದರಿಂದ ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು. ವಿಜಯಪುರ ನಗರದಲ್ಲಿ ಸಂತೆ, ದೇವಸ್ಥಾನ, ಜಾತ್ರೆ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ನೀಡುವಂತೆ ಅಕ್ಕಪಡೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಯಿತು. ಅಕ್ಕಪಡೆಗೆ ಪ್ರತ್ಯೇಕ ವಾಹನದ ಸೌಲಭ್ಯವಿದ್ದು, ಅದರಲ್ಲಿ ಪೊಲೀಸ್ ಇಲಾಖೆಯ ಓರ್ವ ವಾಹನ ಚಾಲಕರು ಹಾಗೂ ಓರ್ವ್ಬ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ನಿಯೋಜಿತರಾಗಿರುತ್ತಾರೆ ಎಂದು ತಿಳಿಸಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ದೀಪಾಕ್ಷಿ ಜಾನಕಿ, ಪೊಲೀಸ್ ಇನ್ಸ್ಪೆಕ್ಟರ್ ವಿಠ್ಠಲ ಕೊಕಟನೂರ, ಜಿಲ್ಲಾ ಮಿಷನ್ ಸಂಯೋಜಕರಾದ ಭಾರತಿ ಹೊನ್ನಳ್ಳಿ ಹಾಗೂ ಅಕ್ಕಪಡೆ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಧಿಕಾರಿ ದೀಪಾ ಕಾಳೆ ಅವರು ಪ್ರಕಟಣಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, January 13, 2026

14-01-2026 EE DIVASA KANNADA DAILY NEWS PAPER

ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ ವಿವಿಧ ಹೂ-ಹಣ್ಣು ತರಕಾರಿಯಲ್ಲಿ ಅರಳಿದ ಕಲಾಕೃತಿಗಳು : ನೋಡುಗರ ಹೃನ್ಮನ ಸೆಳೆಯುತ್ತಿದೆ

 ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಇವರ ಸಹಯೋಗದೊಂದಿಗೆ ಇದೇ ಜನವರಿ 13ರಿಂದ 15ರವರೆಗೆ ನಗರದ ಸ್ಟೇಶನ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು. 

 ಫಲಪುಸ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ ಕಲಾಕೃತಿಗಳು ಜನಾಕರ್ಷಣೆಯವಾಗಿವೆ. ಒಂದಕ್ಕಿAತ ಒಂದು ವಿಭಿನ್ನ ಆಲೋಚನೆ, ಸೃಜನಶೀಲತೆ ಹಾಗೂ ನೈಸರ್ಗಿಕ ಸೌಂದರ್ಯವನ್ನು ಸೃಷ್ಟಿಸುವ ಸನ್ನಿವೇಶ ಈ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ. 


 ಪ್ರದರ್ಶನದಲ್ಲಿ ಹೂವಿನಲ್ಲಿ ಅರಳಿದ ಗೋಲಗುಮ್ಮಟ, ಗಿಡದಲ್ಲಿ ಕುಳಿತ ನಾಟ್ಯ ಮಯೂರಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಹೂವಿನಲ್ಲಿ ಮೂಡಿಬಂದ ಡಾಲ್ಫಿನ್, ಪುಷ್ಪ ಮಾರಾಟಕ್ಕೆ ಬಂದ ಪುಷ್ಪಲತಾ ಚಿತ್ರ, ನೀರಿನಿಂದ ಹೊರಬಂದ ಹಂಸ ಸೇರಿದಂತೆ ಮುಂತಾದ ಕಲಾಕೃತಿಗಳು ಗಮನ ಸೆಳೆಯುತ್ತಿವೆ. 

 ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದ ಭೌಗೋಳಿಕ ಮಾನ್ಯತೆ ಪಡೆದ ಇಂಡಿ ಲಿಂಬೆ, ವಿವಿಧ ಬಗೆಯ ಹೂಗಳಿಂದ ನಿರ್ಮಾಣವಾದ ಕಲಾ ಕೃತಿಗಳು, ಆರೋಗ್ಯ ಸಂದೇಶವನ್ನು ಸಾರುವ ಹಣ್ಣುಗಳ ಕಲಾಕೃತಿ, ತರಕಾರಿಯಲ್ಲಿ ಸೃಷ್ಟಿಸಿದ ಮಹಾಪುರುಷರ ಆಕೃತಿಗಳನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ. 

 ಸಿಂಪಿಯಲ್ಲಿ ಅರಳಿದ ಹಣ್ಣು, ಹೂವಿನಲ್ಲಿ ಅರಳಿದ ಅಳಿಲು, ಹಸಿ ಈರುಳ್ಳಿಯಲ್ಲಿ ಉದ್ಭವಿಸಿದ ತೋಟದ ಮನೆ, ಕಲಾಕೃತಿಗಳು ಕಲಾವಿದರ ವೈವಿಧ್ಯಮಯ ಕಲ್ಪನೆಗೆ ಸಾಕ್ಷಿಕರಿಸಿವೆ. ಧಾನ್ಯಬೀಜಗಳಿಂದ ನಿರ್ಮಿಸಿದ ಕಲಾ ಕೃತಿಗಳಲ್ಲಿ ಸಿರಿಧಾನ್ಯದಲ್ಲಿ ಮೂಡಿಬಂದ ಸ್ವಾಮಿವಿವೇಕಾನಂದರು, ರಾಜಗಿರಿ ಬೀಜಗಳಿಂದ ಮೂಡಿಬಂದ ಜಾಂಬವAತ ಆಕರ್ಷಣೀಯವಾಗಿವೆ. 

 ಕುಟುಂಬ ಸಮೇತರಾಗಿ ಪ್ರದರ್ಶನ ವೀಕ್ಷಣೆಗೆ ಬಂದವರು ಸೆಲ್ಪಿ ತೆಗೆದುಕೊಂಡು ಆನಂದಿಸಬಹುದಾಗಿದೆ. ಮನರಂಜನೆ ಮತ್ತು ನಾವಿನ್ಯತೆಯನ್ನು ಮೇಳೈಸಿದಂತೆ ಪ್ರದರ್ಶನಕ್ಕೆ ಆಗಮಿಸಿದವರಿಗೆ ಜೋಡಿ ಸೆಲ್ಫಿ ಪಾಯಿಂಟ್, ಪಕ್ಷಿ ಸೆಲ್ಫಿ ಫಾಯಿಂಟ್‌ಗಳನ್ನು ಈ ಪ್ರದರ್ಶನದಲ್ಲಿ ರೂಪಿಸಲಾಗಿದೆ. ಒಟ್ಟಾರೆ ಈ ಪ್ರದರ್ಶನದಲ್ಲಿ ಪ್ರಕೃತಿ, ಕಲೆ, ಆರೋಗ್ಯ, ಸಾಮಾಜಿಕ ಸಂದೇಶ ಸೇರಿದಂತೆ ಎಲ್ಲವನ್ನು ಒಂದೂಗುಡಿಸಿ ವಿಜಯಪುರದ ಸಾಂಸ್ಕೃತಿಕ ವೈಭವಕ್ಕೆ ಹೊಸ ಆಯಾಮ ನೀಡಿದೆ.

 ಶಾಲಾ ಮಕ್ಕಳಿಗೆ ತೋಟಗಾರಿಕೆ ವಿಷಯಗಳ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಜಿಲ್ಲೆಯ ರೈತರು ಬೆಳೆದ ಎಲ್ಲ ಬಗೆಯ ಹಣ್ಣು, ತರಕಾರಿ ಹಾಗೂ ಪುಷ್ಪಗಳ ಪ್ರದರ್ಶನ ಏರ್ಪಡಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ, ನಾಗರಿಕರಿಗೆ, ಗೃಹಿಣಿಯರಿಗೆ ಬೋನ್ಸಾಯ ಗಿಡಗಳ ಬೇಸಾಯ, ಅಣಬೆ ಬೇಸಾಯ, ಕೈತೋಟ, ಸಾವಯವ ಕೃಷಿಗೆ ಉತ್ತೇಜನ ನೀಡಲು ಪ್ರದರ್ಶಿಸಲಾಗಿದೆ. ರೈತರಿಗೆ ಮಾಹಿತಿ ನೀಡಲು ತೋಟಗಾರಿಕೆ ಸೇವಾ ಕೇಂದ್ರ, ವಿವಿಧ ಯಂತ್ರೋಪಕರಣ, ಹನಿ ನೀರಾವರಿ ಉಪಕರಣಗಳು ಹಾಗೂ ಇತರ ಪರಿಕರ ಮಳಿಗೆಗಳನ್ನು ಸ್ಥಾಪಿಸಲಾಗಿದೆ. 

 ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ದ್ರಾಕ್ಷಿ, ದಾಳಿಂಬೆ ಮತ್ತು ಡ್ರಾö್ಯಗನ್ ಫ್ರೂಟ್ ಬೆಳೆಗಳಲ್ಲಿ ಹವಾಮಾನ ಅಧಾರಿತ ಸಮಗ್ರ ಬೇಸಾಯ ಪದ್ಧತಿ, ಜೇನು ಸಾಕಾಣಿಕೆ ತರಬೇತಿ ಹಾಗೂ ತಾಳೆ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಕುರಿತು ಈ ಪ್ರದರ್ಶನದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಈ ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸಂಕ್ರಾAತಿ ಹಬ್ಬಕ್ಕೆ ಬೇಕಾಗುವ ಹಣ್ಣು ಹಂಪಲುಗಳನ್ನು ರೈತರಿಂದ ನೇರವಾಗಿ ಸಾರ್ವಜನಿಕರಿಗೆ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ ಸಂಜೆ ವಿವಿಧ ಕಲಾ ತಂಡ, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರತಿ ಬೆಳಿಗ್ಗೆ 9-30 ರಿಂದ 8-30ರವರೆಗೆ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಪರೂಪದ ಪ್ರದರ್ಶನದಲ್ಲಿ ಭಾಗವಹಿಸಿ ವೀಕ್ಷಣೆ ಮಾಡುವಂತೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ ಭಾವಿದೊಡ್ಡಿ ಮನವಿ ಮಾಡಿಕೊಂಡಿದ್ದಾರೆ. 

 ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಬಿ.ಎಸ್.ಕವಲಗಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೇರಿದಂತೆ, ರೈತ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.