Tuesday, July 14, 2020

15-07-2020 EE DIVASA KANNADA DAILY NEWS PAPER

ಜಿಲ್ಲೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ 3 ಕೋವಿಡ್ ಸೋಂಕಿತರ ನಿಧನ : ಶಿಷ್ಟಾಚಾರದಂತೆ ಅಂತ್ಯಕ್ರಿಯೆ


ಈ ದಿವಸ ವಾರ್ತೆ
ವಿಜಯಪುರ  : ಜಿಲ್ಲೆಯಲ್ಲಿ ಇಂದಿನ ವೈದ್ಯಕೀಯ ವರದಿಯನ್ವಯ ಮೂವ್ವರು ಕೋವಿಡ್-೧೯ ಪಾಸಿಟಿವ್ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅದರಂತೆ ವಿಜಯಪುರ ನಗರದ ಶಾಪೇಟಿ, ಸ್ಟೇಶನ್ ಹಿಂದಿನ ರಸ್ತೆಯ ನಿವಾಸಿಯಾದ ೫೫ ವರ್ಷದ ಪುರುಷ (ರೋಗಿ ಸಂಖ್ಯೆ – ೨೪೭೭೩) ಕೋವಿಡ್ ಪಾಸಿಟಿವ್ ವ್ಯಕ್ತಿಯು ದಿನಾಂಕ ೦೫-೦೭-೨೦೨೦ ರಂದು ನಿಮೋನಿಯಾ, ಜ್ವರ, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟು ದಿನಾಂಕ ೧೧-೭-೨೦೨೦ ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಜಯಪುರ ನಗರದ ಮುರಾಣಕೇರಿ ಕಾಲನಿಯ ನಿವಾಸಿಯಾದ ೫೦ ವರ್ಷದ ಪುರುಷ (ರೋಗಿ ಸಂಖ್ಯೆ – ೩೧೮೮೦) ಕೋವಿಡ್ ಪಾಸಿಟಿವ್ ವ್ಯಕ್ತಿಯು ದಿನಾಂಕ ೧೦-೦೭-೨೦೨೦ ರಂದು ೧೨.೪೨ ಗಂಟೆಗೆ ಜ್ವರ, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಮತ್ತು ನಾಲ್ಕು ವರ್ಷಗಳಿಂದ ಸಕ್ಕರೆ ಕಾಯಿಲೆ, ರಕ್ತದೊತ್ತಡ, ೨ ವರ್ಷಗಳಿಂದ ಹೃದಯ ಸಂಬAಧಿ ಕಾಯಿಲೆಗಳಿಂದ ಬಳಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟು ದಿನಾಂಕ ೧೦-೭-೨೦೨೦ ರಂದು ೯.೦೦ ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದೇ ರೀತಿ ವಿಜಯಪುರ ನಗರದ ಕಾಳಿಕಾ ನಗರ, ಆಶ್ರಮದ ನಿವಾಸಿಯಾದ ೬೮ ವರ್ಷದ ಪುರುಷ (ರೋಗಿ ಸಂಖ್ಯೆ – ೩೫೨೧೬) ಕೋವಿಡ್ ಪಾಸಿಟಿವ್ ವ್ಯಕ್ತಿಯು ದಿನಾಂಕ ೦೭-೦೭-೨೦೨೦ ರಂದು ಕೆಮ್ಮು, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಮತ್ತು ಏಳು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟು ದಿನಾಂಕ ೧೩-೭-೨೦೨೦ ರಂದು ೯.೦೦ ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೃತರ ಅಂತ್ಯಕ್ರಿಯೆಯನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಅವರು ತಿಳಿಸಿದ್ದಾರೆ.

Monday, July 13, 2020

ಸೇವೆಯ ಮಾಡುವ ಭಾಗ್ಯವಿದು...



ಎಲ್ಲೆಲ್ಲೂ ಕೊರೊನ ಅವಾಂತರ.... 
ಕಾಪಾಡಲೇ ಬೇಕು ಸಾಮಾಜಿಕ ಅಂತರ.. 

ಕೊರೊನ ಅವಾಂತರದಲಿ  ಬಡವನ ಪಾಡ ಕೇಳೋರು ಯಾರು?? 
ಸೀಲ್ ಡೌನ್ ಲೊಕ್ಡೌನ್ ನಡುವಿನ ಜೀವನದ ಬೇಗೆಯ ಅನುಭವಿಸೋರಾ ಪಾಡ ಗಮನಿಸೋರು ಯಾರು?? 
ತುತ್ತಿನ ಚೀಲವ ತುಂಬಿಸೋ ಕೈಗಳ ಕಟ್ಟಿ ಹಾಕಿ ಅವರದಲ್ಲದ ತಪ್ಪಿಗೆ ಪರಿತಪಿಸೋ ಜೀವಕೆ ಆಧಾರ ಆಗೋರು ಯಾರು?? 
 ಒಂದು ಹೊತ್ತಿನ ತುತ್ತಿಗೆ ದುಡಿಯೋ ಜೀವಕೆ ಮರುಜೀವವ ಕೊಡಲು ಸಂಜೀವಿನಿಯ ಕೊಡೋರು  ಯಾರು?? 

ಸಂಕಷ್ಟ ಕಾಲದಲ್ಲೂ ಅಳಿದವರ ಹೆಸರ ಉಳಿಸಲು ಕಟ್ಟಿಸೋ ಸ್ಮಾರಕಗಳ ಹೆಸರಲಿ ನೋಟುಗಳ ಸುರಿಯುವಿರಿ... 
ಬದುಕಿರುವವರ ಉಸಿರ ಉಳಿಸುವ ಕಾರ್ಯಕ್ಕಾಗಿ ನೋಟುಗಳ ಸುರಿಯಿರಿ... 
ಉಸಿರ ಉಳಿಸಿದರೆ ನಿಮ್ಮ ಹೆಸರು ಅಮರವಾಗೋದು. 

ರಾಜನಂತೆ ಮೆರೆಯೋ ರಾಜಕಾರಣಿಗಳೇ... 
ಬೇಡವಾದನೆ ನಿಮ್ಮ ಮತಭಾಂದವ ನಿಮಗೀಗಾ..
ಅಧಿಕಾರದ ಗದ್ದುಗೆ ಏರಲು ಕಂತೆ ಕಂತೆ ನೋಟುಗಳ ಸುರಿದಿರಲ್ಲ ಅಭಿಮತಗಳಿಗಾಗಿ...

ಜನಪ್ರತಿನಿಧಿ ಎಂಬ ಬಿರುದು ಹೊತ್ತ ನಿಮಗೀಗಾ.. 
ಬಿರುದು ಕೊಟ್ಟೋರಾ ಹಿತ ಕಾಯುವ ಸಮಯವೀಗಾ..
ಸುರಿಯಿರಿ ಕಂತೆ ಕಂತೆ ನೋಟುಗಳ ಇದೀಗಾ.. 
ಬಡವರ ಜೀವವ ಉಳಿಸಿಕೊಡುವ ಪುಣ್ಯದ ಕಾರ್ಯಕ್ಕಾಗಿ 
ತುತ್ತಿನ ಚೀಲವ ತುಂಬಿಸಿ ಕೊಡುವ ಸಲುವಾಗಿ.. 
ಬಡವನ ಆರೋಗ್ಯವ ಕಾಪಾಡುವುದಾಕ್ಕಾಗಿ... 

ಗದ್ದುಗೆ ಏರಿರುವ ನಿಮಗೀಗಾ.. 
ಮತದಾರನ ಸೇವೆಯ ಮಾಡುವ ಭಾಗ್ಯ ದೊರಕಿರುವಾಗ..
ನಿಮ್ಮಯ ನೋಟುಗಳ ಸುರಿಯಿರಿ ಬಡವನ ಜೀವನಕ್ಕಾಗಿ
ಕಂತೆ ಕಂತೆ ನೋಟುಗಳ ಸುರಿಯಿರಿ ಬಡವನ ಆರೋಗ್ಯಕ್ಕಾಗಿ.. 
ಮತದಾನದ ವೇಳೆಯಲಿ ಅಮೂಲ್ಯ ಮತವೆಂದು ಬಣ್ಣಿಸುವ ನೀವುಗಳೇ.. 
ಅಮೂಲ್ಯ ಜೀವಕೆ ಬೆಲೆ ಕೊಡುವುದಾ ನೋಡಿದರೆ ಮುಂದಿನ ಚುನಾವಣೆಯಲಿ ನಿಮ್ಮ ಮತಬೇಟೆಯ ಕಾರ್ಯದ ಚಿಂತೆ ನಿಮಗಿಲ್ಲ.. 

ನಿಮ್ಮ ಮತದಾರರ ಕ್ಷೇತ್ರವ ದತ್ತುಪಡೆಯುವ ಮನಸ ಮಾಡಿ...
ಕೊರೊನ ಮುಕ್ತ ಕ್ಷೇತ್ರಕ್ಕಾಗಿ ನಿಮ್ಮ  ಅಧಿಕಾರವ ಮುಡಿಪಾಗಿಡಿ..
ಜನತಾ ಸೇವೆಯೇ ಜನಾರ್ಧನ ಸೇವೆಯೇ ಎಂಬುದ ತಿಳಿಯಿರಿ..
ಸಂಕಷ್ಟ ಕಾಲದಲಿ ತೋರಿಸಿ ನಿಮ್ಮ ಪೌರುಷವ.. 
ದ್ವೇಷದ ರಾಜಕಾರಣವ ಬಿಟ್ಟು, ಪಕ್ಷಭೇದವ ತೊರೆದು ಜನರಿಗಾಗಿ ಹೋರಾಡಿ
ಜೀವನ ಪರ್ಯಂತ ಹಣವ ಸುರಿಯದೆ ಗದ್ದುಗೆಯಲಿ ಮೆರೆದಾಡುವಿರಿ.. 

ಸಮಿತ ಶೆಟ್ಟಿ 
ಸಿದ್ಧಕಟ್ಟೆ

Friday, July 10, 2020

11-07-2020 EE DIVASA KANNADA DAILY NEWS PAPER

ಜಿಲ್ಲೆಯಲ್ಲಿ ಇಂದು ಮತ್ತೆ ೮೯ ಜನರಿಗೆ ಕೋವಿಡ್ ಪಾಸಿಟಿವ್ ದೃಢ



ಈ ದಿವಸ ವಾರ್ತೆ
ವಿಜಯಪುರ  : ಜಿಲ್ಲೆಯಲ್ಲಿ ಇಂದಿನ ವೈದ್ಯಕೀಯ ವರದಿಯನ್ವಯ ಮತ್ತೆ ಒಟ್ಟು ೮೯ ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಇದರಲ್ಲಿ ನಾಲ್ವರು ಮಹಾನಗರ ಪಾಲಿಕೆಯ ಮೂವ್ವರು ಪೌರಕಾರ್ಮಿಕರು, ಓರ್ವ ಪೌರಕಾರ್ಮಿಕ ಮೇಲ್ವಿಚಾರಕರು , ಒಬ್ಬರು ಪೊಲೀಸ್ ಹಾಗೂ ನಾಲ್ವರು ಆರೋಗ್ಯ ಆರೈಕೆ ಕಾರ್ಯಕರ್ತರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ಅದರಂತೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೭೧೦ ಕೋವಿಡ್ ೧೯ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ೪೬೩ ಗುಣಮುಖರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ ಸದ್ಯ ೨೩೪ ಕೋವಿಡ್ -೧೯ ಪಾಸಿಟಿವ್ ಸಕ್ರಿಯ ರೋಗಿಗಳಿದ್ದು, ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು ೧೩ ಜನ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.