Sunday, November 12, 2023
Saturday, November 11, 2023
Friday, November 10, 2023
Thursday, November 9, 2023
ವಿಜಯಪುರ ಜಿಲ್ಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಿ ; ಇಲ್ಲವಾದಲ್ಲಿ ರಾಜೀನಾಮೆ ನೀಡಿ : ಶಿವಸೇನಾ ಮುಖಂಡ ಸತೀಶ ಪಾಟೀಲ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ವಿಜಯಪುರ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿದೆ ಹಾಗೂ ವಿದ್ಯುತ್ ಲೋಡ್ ಶೆಡ್ಡಿಂಗ್ ಜೊತೆಗೆ ಹದಗೆಟ್ಟ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆ ಇನ್ನು ಅನೇಕ ಜ್ವಲಂತ ಸಮಸ್ಯೆಗಳು ಜಿಲ್ಲೆಯಲ್ಲಿ ಇರುವ ಸಂದರ್ಭದಲ್ಲಿ ಜನಪರ ಕಾರ್ಯಮಾಡುವುದನ್ನು ಬಿಟ್ಟು ಜಿಲ್ಲೆಯ ನಾಮಕರಣಗಳ ಹಿಂದೆ ಬೆನ್ನು ಹತ್ತಿರುವ ಸರ್ಕಾರದ ಈ ಮನೋಧೋರಣೆಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ವಿಜಯಪುರದಲ್ಲಿ ಮೂಲಭೂತ ಸೌಕರ್ಯಗಳನ್ನು ಜನರಿಗೆ ಕಲ್ಪಿಸಿ ಸುಂದರ ನಗರವನ್ನಾಗಿ ಮಾಡುವಲ್ಲಿ ಶ್ರಮಿಸದಿರುವುದು ವಿಷಾದದ ಸಂಗತಿ. ಇದಕ್ಕೆ ರಾಜಕಾರಣಿಗಳ ಇಚ್ಚಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಇಂತಹ ತಂತ್ರಜ್ಞಾನದ ಯುಗದಲ್ಲಿ ಅಭಿವೃದ್ಧಿ ಎನ್ನುವುದು ವಿಜಯಪುರ ಜಿಲ್ಲೆಗೆ ಮರಿಚೀಕೆಯಾಗಿದೆ. ಸರ್ಕಾರವು ಎಲ್ಲಾ ರಂಗಗಳಲ್ಲಿ ಅಂದರೆ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯ , ನಿರುದ್ಯೋಗ ಸಮಸ್ಯೆಗಳು ಎಂದಿನಂತೆ ಮುಂದೆ ಸಾಗಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯವನ್ನಾಳುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಹೆಸರಿಗೆ ಸ್ಥಾನವನ್ನು ಅಲಂಕರಿಸಿ ಬೆದರುಗೊಂಬೆಯಂತೆ ಕಾರ್ಯಮಾಡುತ್ತಿರುವುದು ರಾಜ್ಯದ ಮುಗ್ದ ಜನತೆ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಜನ ಆಕ್ರೋಶಗೊಂಡು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಎರಡು ಮಾತಿಲ್ಲ. ಕೂಡಲೇ ಮಾಡಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಮಾಡಿ ತಮ್ಮ, ಮಾನ ಮರ್ಯಾದೆ ಹಾಗೂ ಅಧಿಕಾರದ ಗೌರವವನ್ನು ಕಾಯ್ದುಕೊಳ್ಳಬೇಕು. ಇಲ್ಲವಾದಲ್ಲಿ ಕೂಡಲೇ ರಾಜಿನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
Wednesday, November 8, 2023
ದೇಶಕ್ಕಾಗಿ ನಾವು ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕು: ಗೋವಿಂದ ಕಾರಜೋಳ ಕರೆ
ಮಂಗಳವಾರ ಜಿಲ್ಲೆಯ ಉಕ್ಕಲಿ ಗ್ರಾಮದ ಬಿಎಲ್ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕøತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯ ವೀರಯೋಧ ಕಾಶೀರಾಯನ ತ್ಯಾಗಕ್ಕೆ ಬೆಲೆ ಕಟ್ಟಲಾಗಲ್ಲ. ಇಂತಹ ವೀರನಿಗೆ ಜನ್ಮ ನೀಡಿದ ತಂದೆ-ತಾಯಿಗೆ ಎಷ್ಟು ಕೊಂಡಾಡಿದರೂ ಕಡಿಮೆ. ಪುಲ್ವಾಮಾ ದಾಳಿ ಸಂದರ್ಭದಲ್ಲಿ ಶತ್ರುವನ್ನು ಸದೆಬಡೆದು, ವೀರ ಮರಣ ಹೊಂದಿದ ಕಾಶೀರಾಯ ಸೂರ್ಯಚಂದ್ರ ಇರುವರೆಗೂ ಅಜರಾಮರಾಗಿ ಉಳಿಯಲಿದ್ದಾರೆ. ಅವರ ತ್ಯಾಗದ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವ-ನೆನಪಿಸುವ ನಿಟ್ಟಿನಲ್ಲಿ ಪುತ್ಥಳಿ ಅನಾವರಣ ಅತಿ ಸ್ತ್ಯುತ್ಯವಾಗಿದೆ. ಕಾಶೀರಾಯನಂತೆ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ದೇಶಕ್ಕಾಗಿ ನಾವು ಏನನ್ನಾದರೂ ಕೊಡುಗೆ ನೀಡಬೇಕೆಂಬ ಬಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಮಾತನಾಡಿ, ದೇಶ ಕಾಯುವ ಸೈನಿಕ ಯಾವುದೇ ಒಂದು ಜಾತಿ, ಮತ, ಪಂಥ, ಸಮಾಜದ ರಕ್ಷಣೆಗಾಗಿ ಗಡಿಯಲ್ಲಿ ನಿಲ್ಲುವುದಿಲ್ಲ. ತನ್ನ ಮನೆ, ಸಂಬಂಧಿಕರನ್ನು ದೂರವಾಗಿ ಇಡೀ ದೇಶದ ಜನರು ನೆಮ್ಮದಿಯಿಂದ ಸುರಕ್ಷಿತವಾಗಿರಲಿ ಎಂಬ ಭಾವನೆಯಿಂದ ಗಡಿಯಲ್ಲಿ ಬಿಸಿಲು, ಮಳೆ ಲೆಕ್ಕಿಸದೇ ತನ್ನ ಪ್ರಾಣವನ್ನು ಮುಡುಪಾಗಿಟ್ಟು ದೇಶ ರಕ್ಷಣೆಗೆ ನಿಲ್ಲುತ್ತಾನೆ. ಇಂತಹ ಸೈನಿಕರ ಪ್ರತಿ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡೆಬೇಕು ಎಂದರು.
ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಕೊಲ್ಹಾಪುರದ ಶ್ರೀ ಸಿದ್ದಗಿರಿ ಮಹಾಸಂಸ್ಥಾನ ಕನ್ನೇರಿ ಮಠದ ಕೃಷಿ ಋಷಿ ರಾಷ್ಟ್ರಸಂತ ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಗಳು ಉಕ್ಕಲಿ ಯರನಾಳ ಸಂಸ್ಥಾನ ವಿರಕ್ತಮಠದ ಪರಮಪೂಜ್ಯ ಶ್ರೀ ಡಾ.ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ಜಾಲವದಿ-ನಂದವಾಡಗಿ ಆಳಂದ ಶ್ರೀ ಡಾ. ಷ.ಬ್ರ.ಅಭಿನವ ಚನ್ನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿ ಹಿರೇಮಠದ ಶ್ರೀ ಷ.ಬ್ರ. ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಹಜರತ್ ಸೈಯ್ಯದ್ ಷಾ ಹುಸೇನ್ ಪೀರ ಖಾದ್ರಿ ಚಿಸ್ತಿ ಮನಗೂಳಿ ಶರೀಫ್ದ ಶ್ರೀ ಡಾ.ಫೈರೋಜ ಇನಾಂದಾರ, ಧರ್ಮಗುರುಗಳಾದ ಮೌಲಾನಾ ಶಕೀಲ್ ಅಹಮದ್ ಖಾಸ್ಮಿ ಅವರು ಆರ್ಶೀವಚನ ನೀಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಸಿ.ಎಂ. ಗಣಕುಮಾರ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಮೇಶ ಕಾರಜೊಳ, ಊರಿನ ಗಣ್ಯರಾದ ಎನ್.ಜಿ.ಸಿಂದಗಿ, ಬಾಳು ಮಸಳಿ, ಧರೆಪ್ಪ ಮಸಳಿ, ಶ್ರೀಮತಿ ದೊಡಮನಿ, ಪ್ರಕಾಶ ಪಟ್ಟಣದ, ಬಿ.ಜಿ.ಬಿರಾದಾರ, ಪ್ರಕಾಶ ಜುಮನಾಳ ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು. ಪ್ರವೀಣ ಕಾಮಗೊಂಡ ಸ್ವಾಗತಿಸಿದರು. ಶಿಕ್ಷಕ ಹಿರೇಮಠ, ಟೆಂಕಲಿ ಹಾಗೂ ಮುಲ್ಲಾ ಅವರು ನಿರೂಪಿಸಿದರು. ಮಹೇಶ ಹಾವಿನಾಳ ವಂದಿಸಿದರು.
ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ: ಜಿ.ಪಂ.ಸಿಇಓ ರಾಹುಲ್ ಶಿಂಧೆ
ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮಥ್ರ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು ಓಂಃಅಔಓS ಸಂಸ್ಥೆಯಿಂದ ಎಮ್.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, Sಔಓಓಇ Iಟಿಜಿಡಿಚಿsಣಡಿuಛಿಣuಡಿe ಹಾಗೂ ವಿ.ಭರತ,ಯೋಜನಾ ಸಲಹೆಗಾರರು, ಓಂಃಅಔಓS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು ಅವರನ್ನೊಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿತು.
ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ ಮತ್ತು ಭವಿಷ್ಯದಲ್ಲಿ ಶೀಥಲೀಕರಣದ ಕಟ್ಟಡ ವಿಸ್ತರಣೆಗೆ ಅವಕಾಶವಿರುವಂತೆ ಯೋಜನೆಯನ್ನು ರೂಪಿಸಲು ತಿಳಿಸಿದರು.
ಯೋಜನಾ ಸ್ಥಳದಲ್ಲಿ 800 ಕೆವಿ ಸಾಮಥ್ರ್ಯದ ವಿದ್ಯುತ್ ಸೌಲಭ್ಯವನ್ನು ಒದಗಿಸಲು ಇರುವ ಅವಕಾಶಗಳು ಹಾಗೂ ತಗಲುವ ವೆಚ್ಚಗಳ ಕುರಿತು ಯೋಜನಾ ಅಂದಾಜು ತಯಾರಿಸಲು ಹೆಸ್ಕಾಂನ ಸಹಾಯಕ ಅಭಿಯಂತರು ಅವರಿಗೆ ಸೂಚಿಸಿದರು.
ನಿಯೋಜಿತ ಸ್ಥಳಕ್ಕೆ ಅಥಣಿ ರಸ್ತೆಯಿಂದ ಮಹಿಳಾ ವಿಶ್ವ ವಿದ್ಯಾಲಯದ ಹಿಂಭಾಗದ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕೂಡುವ ರಸ್ತೆಯ ಮೂಲಕ ಪ್ರವೇಶ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಪಂಚಾಯತ್ ರಾಜ್ ಇಂಜಿನಿಯರಿಂಗ ಇಲಾಖೆಯ ಸಹಾಯಕ ಅಭಿಯಂತರರಿಗೆ ಕ್ರಮ ವಹಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಸಮಾಲೋಚಕರಾದ ಶರತ್ ವ್ಹಿ, ನಬಾರ್ಡ್ ಸಂಸ್ಥೆಯ ಮುಖ್ಯ ಇಂಜಿನಿಯರ್ ಪ್ರಭಾಕರ ಎಲ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವೈನ್ ಹಾಗೂ ಗ್ರೇಪ್ಸ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಸೋಮು, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಿ. ಎಸ್ ಚವ್ಹಾಣ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳಾದ ಗುರುನಾಥ ಪಾಟೀಲ, ನಾಗೇಂದ್ರ ಗುರುನಾಳ, ಸಚಿನ ಉಟಗಿ, ತೊರವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರಾಜಶ್ರೀ ತುಂಗಳ, ಗ್ರಾಮ ಪಂಚಾಯತಿ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


