Sunday, November 19, 2023

ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ : ಹಿರಿಯ ಪತ್ರಕರ್ತ ಕೆ.ಎನ್. ರಮೇಶ

ಈ ದಿವಸ ವಾರ್ತೆ

ವಿಜಯಪುರ : ಪ್ರಶಸ್ತಿ ಕೇಳಿ ಪಡೆಯುವುದಾಗಬಾರದು. ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ನೀಡುತ್ತದೆ ಎಂದು ಹಿರಿಯ ಪತ್ರಕರ್ತ ಕೆ.ಎನ್. ರಮೇಶ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಪತ್ರಿಕಾ ಭವನದಲ್ಲಿ ಭಾನುವಾರ ರಾಜ್ಯ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಆದರೆ ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ. ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ ಎಂದರು.

ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಭಂಡಾರಿ ಸನ್ಮಾನ ಸ್ವೀಕರಿಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಪರಿಗಣ ಸಿ ರಾಜ್ಯ ಸರಕಾರ ನನಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು, ಸಂತಸವನ್ನುಂಟು ಮಾಡಿದೆ ಎಂದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಸೀತಾರಾಮ ಕುಲಕರ್ಣಿ, ಷಡಕ್ಷರಿ ಕಂಪೂನವರ ಸನ್ಮಾನ ಸ್ವೀಕರಿಸಿ, ತಮಗೆ ಗೌರವ ಸನ್ಮಾನ ನೀಡಿದ ಕಾನಿಪ ಸಂಘಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಕಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸಿ, ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಎರಡನ್ನೂ ಪರಿಗಣ ಸುತ್ತಿದೆ. ಆದರೆ ವಯೋಮಿತಿಯಲ್ಲಿಯೂ ಸಡಿಲಿಕೆಯಾಗಬೇಕು ಎಂದರು.

ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ, ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಫಿರೋಜ್ ರೋಜಿನದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ಸಂಘದ ರಾಜ್ಯ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ಐಎಫ್ ಡಬ್ಲೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಗುರುರಾಜ ಗದ್ದನಕೇರಿ, ಸದಸ್ಯರಾದ ಗೋಪಾಲ ಕಣ ಮನಿ, ಇಸ್ಮಾಯಿಲ್ ಮುಲ್ಲಾ, ಮಾಧವರಾವ್ ಕುಲಕರ್ಣಿ ಮತ್ತಿತರರಿದ್ದರು.

ಸಂಘದ ಸಲಹಾ ಸಮಿತಿ ಸದಸ್ಯ ಅಶೋಕ ಯಡಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವೇಂದ್ರ ಹೆಳವರ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು


20-11-2023 EE DIVASA KANNADA DAILY NEWS PAPER

Friday, November 17, 2023

18-11-2023 EE DIVASA KANNADA DAILY NEWS PAPER

ನ.20ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ಉದ್ಘಾಟನೆ

ವಿಜಯಪುರ : ಅಖಿಲ ಭಾರತ ಸಹಕಾರ ಸಪ್ತಾಹದ 70ನೇ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಶತಮಾನೋತ್ಸವ ಭವನ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಮತ್ತು ಸಹಕಾರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಮಾರಂಭದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.

ನಗರದ ಕೇಂದ್ರ ಸಹಕಾರಿ ಬ್ಯಾಂಕ್‍ನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ 20 ರಂದು ನಡೆಯು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲೆಯ ಡಿಸಿಸಿ ಸಂಘಗಳ ಸದಸ್ಯರು, ವಿವಿಧ ಸಹಕಾರಿ ಸಂಘಗಳ ಸಹಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ವೈಯಕ್ತಿಕವಾಗಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಬ್ಯಾಂಕಿನ ಎಲ್ಲಾ ನಿರ್ದೇಶಕರು, ಸದಸ್ಯರು ಸೇರಿ ಸಮಾರೋಪ ಸಮಾರಂಭದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಸಮಾರಂಭದಲ್ಲಿ ಸಹಕಾರಿ ಇಲಾಖೆ ಎಲ್ಲಾ ಹಿರಿಯ, ಮಾಜಿ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಎಲ್ಲರಿಗಿಂತಲು ಮೊದಲು ರಾಜ್ಯದಲ್ಲಿ ಸಹಕಾರಿ ಚಳುವಳಿ ಪ್ರಾರಂಭವಾದರೂ ಮಹಾರಾಷ್ಟ್ರ, ಗುಜರಾತ್ ಸಹಕಾರಿ ರಂಗದಲ್ಲಿ ಮುಂದಿದೆ. ಮಹಾರಾಷ್ಟ್ರ, ಗುಜರಾತ್ ಮಾದರಿಯಲ್ಲಿ ರಾಜ್ಯಕ್ಕೆ ಪೆÇ್ರೀತ್ಸಾಹ ಸಿಗಬೇಕು ಎನ್ನುವುದು  ಎಲ್ಲಾ ಸಹಕಾರಿಗಳ ಮಹದಾಸೆಯಾಗಿದೆ.  ನಮ್ಮಲ್ಲೂ ಸಹಕಾರ ಪೆÇ್ರೀತ್ಸಾಹ ನೀಡಿದರೆ ಜನರಿಗೆ ಇನಷ್ಟು ಆಸಕ್ತಿ ಮೂಡಿ ಸಹಕಾರಿ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಇದಕ್ಕೆ ಪೂರಕವಾಗಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳಿಗೆ ಎಲ್ಲಾ ಸಹಕಾರಿಗಳು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನಿರ್ದೇಶಕರು ಸೇರಿ ಮನವಿ ಮಾಡಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.

ಇದು ಪಕ್ಷಾತೀತ ಸಮಾರಂಭ. ಕೇವಲ ಸಹಕಾರಿ ರತ್ನಗಳಿಗೆ ಪ್ರಶಸ್ತಿ, ಪೆÇ್ರೀತ್ಸಾಹ ನೀಡುವ  ಕಾರ್ಯಕ್ರಮ ಅμÉ್ಟೀ ಅಲ್ಲ. ಜೊತೆಗೆ ಸಹಕಾರಿ ತತ್ವಕ್ಕೆ  ಶಕ್ತಿ ತುಂಬಬೇಕು ಎನ್ನುವ ಪ್ರಯತ್ನವಾಗಿದೆ. ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕಟ್ಟಡಗಳು ಉದ್ಘಾಟನೆ ನೆರವೇರಲಿವೆ. ಸಮಾರಂಭಕ್ಕೆ  ಅಂದಾಜು ಮೂವತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಸಿದ್ಧತೆಗಳ ಪರಿಶೀಲನೆ : ನವೆಂಬರ್ 20 ರಂದು ನಡೆಯುವ ಸಮಾರಂಭಕ್ಕೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಹಕಾರ ಸಚಿವರು ಸೇರಿದಂತೆ ವಿವಿಧ ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆ ವಿನ್ಯಾಸ, ಆಸನಗಳ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳ ಕುರಿತು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಪರಿಶೀಲನೆ ನಡೆಸಿದರು.


Thursday, November 16, 2023

17-11-2023 EE DIVASA KANNADA DAILY NEWS PAPER

ನ.18ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿಜಯಪುರ : 110 ಕೆವಿ ದೇವರಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ  ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ 33 ಕೆವಿ ಗೋಲಗೇರಿ ಹಾಗೂ 33 ಕೆವಿ ಕಲಕೇರಿ ಮತ್ತು 11 ಕೆವಿ ಬ್ಯಾಕೋಡ ಹಾಗೂ 11 ಕೆವಿ ಬಂದಾಳ ಐಪಿ ಮಾರ್ಗಗಳಲ್ಲಿ  ನವೆಂಬರ್ 18ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.