Friday, December 1, 2023
ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಕಠಿಣ ಕ್ರಮ : ಸಿಇಓ ರಾಹುಲ್ ಶಿಂಧೆ ಎಚ್ಚರಿಕೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು,
ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ನೀಡಬೇಕು. ಒಂದು ವೇಳೆ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಚಿವರ ಸೂಚನೆಯಂತೆ ತಾಲೂಕು ಪಂಚಾಯತಿ ಹಂತದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ದಿನದಂದು ಸಭೆಯನ್ನು ಆಯೋಜನೆ ಮಾಡಿ, ಸಭೆಯ ನಡುವಳಿಗಳನ್ನು ಈ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಯಾವದೇ ಕಾರಣಕ್ಕೂ ಸಭೆ ರದ್ದುಗೊಳಿಸುವದನ್ನು, ಮುಂದೊಡುವದನ್ನು ಮಾಡದಂತೆ ಅವರು ಸೂಚಿಸಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುμÁ್ಟನ ಇಲಾಖೆಗಳು ಸಹ ನಮ್ಮ ಆರ್.ಡಿ.ಪಿ.ಆರ್ ಇಲಾಖೆಯ ಭಾಗವಾಗಿದ್ದು, ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅತ್ಯಂತ ಸಮನ್ವಯತೆಯಿಂದ ಕಾರ್ಯನಿರ್ವಹಿಸುವÀ ಮೂಲಕ ಬರ ನಿರ್ವಹಣೆಗೆ ಸನ್ನದ್ಧರಾಗುವಂತೆ ಅವರು ತಿಳಿಸಿದರು.
ಪ್ರಗತಿ ಕುಂಠಿತ ಇರುವ ಗ್ರಾಮ ಪಂಚಾಯತಿಗಳಿಗೆ ಖುದ್ದಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರುಗಳು ಭೇಟಿ ನೀಡಿ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ, ಅಧಿಕಾರಿಗಳ ಸಭೆ, ಗ್ರಾಮದಲ್ಲಿ ಸ್ವ-ಸಹಾಯ ಸಂಘದ ಸಭೆ, ಕಾಯಕ ಬಂಧುಗಳ ಸಭೆ ಆಯೋಜನೆ ಮಾಡುವ ಮೂಲಕ ಮಹಿಳೇಯರು ಹೆಚ್ಚಾಗಿ ಯೋಜನೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಎಲ್ಲ ಕೂಸಿನ ಮನೆಗಳು ಕಡ್ಡಾಯವಾಗಿ ಪ್ರಾರಂಭ ಮಾಡುವ ಮೂಲಕ ಮಹಿಳೆಯರು ಮತ್ತು ವಿಕಲಚೇತನರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ಅವರು ಸೂಚಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಮನೆ-ಮನೆಗೆ ಅಧಿಕಾರಿಗಳು ಭೇಟಿ ನೀಡಿ ಕರ ಪತ್ರ ಹಂಚುವದರ ಜೊತೆಗೆ ನಮೂನೆ-06ನ್ನು ಹಂಚಿಕೆ ಮಾಡಬೇಕು.. ಹಂಚಿಕೆ ಮಾಡಿದ ನಮೂನೆ-06ನ್ನು ಭರ್ತಿ ಮಾಡಿ ಕೂಲಿಕಾರರು ಗ್ರಾಮ ಪಂಚಾಯತಿಗೆ ಸಲ್ಲಿಸುವ ಮೂಲಕ ಕೆಲಸ ಪಡೆಯಬೇಕು. ಮುಖ್ಯವಾಗಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ, ಅಲ್ಪ ಸಂಖ್ಯಾತ ಸಮುದಾಯ, ಹಿಂದುಳಿದ ವರ್ಗದ ಜನರಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಐಇಸಿ ಚಟುವಟಿಕೆಗಳನ್ನು ಆಯೋಜಿಸಿ, ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನೆಯ ಕುರಿತು ಗುಣಮಟ್ಟ ಮತ್ತು ಇತರೆ ವಿಷಯಗಳ ಪ್ರಗತಿ ಪರಿಶೀಲನೆಯನ್ನು ತಾಲೂಕು ಹಂತದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಜಂಟಿಯಾಗಿ ನಡೆಸಬೇಕು.ು. ಗ್ರಾಮ ಪಂಚಾಯತಿಯಲ್ಲಿ ತೆರಿಗೆ ವಸೂಲಾತಿಯನ್ನು ಕಡ್ಡಾಯವಾಗಿ ಪಿ.ಓ.ಎಸ್ ಮಷೀನ ಮೂಲಕ ಮಾಡಬೇಕು ಮತ್ತು ಪಿ.ಓ.ಎಸ್ ಮಷಿನ ಮೂಲಕವೇ ಸಾರ್ವಜನಿಕರಿಗೆ ರಶೀದಿ ನೀಡಬೇಕು.. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ನಮೂದಿಸಬೇಕು. ಸಕಾಲ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಸ್ವೀಕೃತ್ತವಾಗುವ ದೂರುಗಳನ್ನು ಕಾಲಮಿತಿಯೊಳಗೆ ಕಡ್ಡಾಯವಾಗಿ ಪರಿಹರಿಸಬೇಕು ಎಂದು ಅವರು ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾದ್ದಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಎಲ್ಲ ಸಿದ್ಧತಾ ಕ್ರಮಗಳನ್ನು ಮುಂಚಿತವಾಗಿ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಸ್ವೀಪ್ ಅಭಿಯಾನದ ಪೆÇೀಸ್ಟರ್ ಬಿಡುಗಡೆ: ಇದೇ ಸಂದರ್ಭದಲ್ಲಿ ಸ್ವೀಪ್ ಅಭಿಯಾನದ ಪೆÇೀಸ್ಟರ್ ಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದಿನಾಂಕ: 02 & 03 ಡಿಸೆಂಬರ್ ರಂದು ಕಡ್ಡಾಯವಾಗಿ ಎಲ್ಲ ಬೂತಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಪ್ರಯುಕ್ತ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಭಾಗವಾಗಿ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತಿ & ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಚಿಸಿದರು. ಈ ಅಭಿಯಾನದ ಕುರಿತು ಎಲ್ಲ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಹಾಗೂ ಸ್ವಚ್ಛ ವಾಹಿನಿಯಲ್ಲಿ ಜಿಂಗಲ್ಸ್ ಅಳವಡಿಸುವ ಮೂಲಕ ಪ್ರಚಾರ ಮಾಡಬೇಕು ಎಂದರು. ಒಟ್ಟಾರೆಯಾಗಿ ಎಲ್ಲ ಅಧಿಕಾರಿಗಳು ಅತೀ ಉತ್ಸಾಹದಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ, ಅನುμÁ್ಠನ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
Thursday, November 30, 2023
ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು
ಈ ದಿವಸ ವಾರ್ತೆ
ವಿಜಯಪುರ:
ವಿಜಯನಗರ ಅರಸರ ಪರವಾಗಿ ಯುದ್ಧದಲ್ಲಿ ಭಾಗವಹಿಸಿ, ಸೋಲನ್ನು ಅನುಭವಿಸಿ, ಅನೇಕ ಸಾವು- ನೋವುಗಳನ್ನು ನೋಡಿದ ದಾಸ ಶ್ರೇಷ್ಠ ಕನಕದಾಸರು ವೈರಾಗ್ಯ ಹೊಂದಿ, ಸಂಸಾರವನ್ನು ತ್ಯಾಗ ಮಾಡಿದರು. ದೇಶ ಸಂಚಾರ ಮಾಡುತ್ತ, ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತ, ಪಂಥ, ಅಸಮಾನತೆ, ಅನ್ಯಾಯ, ಮೌಡ್ಯತೆಗಳನ್ನು ಹೋಗಲಾಡಿಸಲು ನಿರಂತರ ಶ್ರಮಿಸಿದರು. ತಿಮ್ಮಪ್ಪ ನಾಯಕನೆಂದು ಕರೆಸಿಕೊಳ್ಳುತ್ತಿದ್ದ ಇವರು ಗುರುಗಳಾದ ವ್ಯಾಸರಾಯರಿಂದ ಕನಕದಾಸರೆಂದು ಮರುನಾಮಕರಣ ಹೊಂದಿದರು. ತಮ್ಮ ಆರಾಧ್ಯ ದೈವ ‘ಕಾಗಿನೆಲೆ ಆದಿ ಕೇಶವರಾಯ’ ಎಂಬ ಹೆಸರಿನಿಂದ ಹಲವಾರು ಕೀರ್ತನೆಗಳನ್ನು ರಚಿಸಿ, ಸಮಾಜವನ್ನು ಸುಧಾರಣೆ ಮಾಡಲು ಅವಿರತ ಪ್ರಯತ್ನ ಮಾಡಿದರು ಎಂದು ಕನ್ನಡ ಹಿರಿಯ ಉಪನ್ಯಾಸಕರಾದ ಪ್ರೊ. ಸಿದ್ದು ಸಾವಳಸಂಗ ತಮ್ಮ ಉಪನ್ಯಾಸ ನೀಡುತ್ತಾ ಹೇಳಿದರು.
ಇಂದು ಕನಕದಾಸರ ಜಯಂತಿ ಪ್ರಯುಕ್ತ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜು, ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ಹಾವೇರಿ ಜಿಲ್ಲೆಯ ಬಾಡ ಎನ್ನುವಂತ ಚಿಕ್ಕ ಗ್ರಾಮದಲ್ಲಿ ಕ್ರಿ.ಶ.೧೫೦೮ ರಲ್ಲಿ ಬೀರಪ್ಪ ನಾಯಕ ಹಾಗೂ ಬಚ್ಚಮ್ಮ ದಂಪತಿಗಳ ಮಗನಾಗಿ ಕನಕದಾಸರು ಜನಿಸಿದರು. ಅವರ ಪೂರ್ವನಾಮ ತಿಮ್ಮಪ್ಪನಾಯಕ. ಮುಂದೆ ವಿಜಯನಗರ ಅರಸರಿಂದ ೭೮ ಗ್ರಾಮಗಳನ್ನು ಪಡೆದು ಅವರು ನಾಯಕರಾಗಿದ್ದರು.
ಆನಂತರ ಯುದ್ಧದ ಸಾವು ನೋವುಗಳನ್ನು ಅರಿತು ಸಂಸಾರ ತ್ಯಾಗ ಮಾಡಿ ಸಂತರಾದರು.
ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನ್ನೇನಾದರೂ ಬಲ್ಲಿರಾ ಬಲ್ಲಿರಾ
ಎಂದು ಜಾತಿ-ಮತಗಳ ವಿರುದ್ಧ ದನಿಯೆತ್ತಿದರು. ಹಾಗೆಯೇ ‘ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂದು ಇನ್ನೊಂದು ಕೀರ್ತನೆಯಲ್ಲಿ ಹೇಳುತ್ತಾರೆ. ಪುರಂದರದಾಸರು ಹಾಗೂ ಕನಕದಾಸರು ದಾಸ ಸಾಹಿತ್ಯದ ಎರಡು ಕಣ್ಣುಗಳು ಎಂದು ಪ್ರೊ. ಸಿದ್ದು ಸಾವಳಸಂಗ ಹೇಳಿದರು.
ಇನ್ನೋರ್ವ ಹಿರಿಯ ಉಪನ್ಯಾಸಕರಾದ ಪ್ರೊ. ಎಸ್. ಆರ್. ಬಿರಾದಾರ ಮಾತನಾಡುತ್ತಾ ಶ್ರೇಷ್ಠ ಸಂತನಾದ ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿ, ಅವುಗಳನ್ನು ಹಾಡುತ್ತಾ ದೇಶ ಸಂಚಾರ ಮಾಡಿ, ಜನರಲ್ಲಿ ಜಾಗೃತಿಯನ್ನು ಮೂಡಿಸಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅತ್ಯಂತ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸಿ.ಬಿ . ನಾಟೀಕಾರ ಮಾತನಾಡುತ್ತಾ ತಮ್ಮ ಭಕ್ತಿಯಿಂದ ಉಡುಪಿಯ ಶ್ರೀ ಕೃಷ್ಣನನ್ನು ಒಲಿಸಿಕೊಂಡಿರುವ ಸಂತ ಕನಕದಾಸರು ಸಮಾಜಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ನಾವು ಮರೆಯುವಂತಿಲ್ಲ. ಕೇವಲ ಕಾಟಾಚಾರಕ್ಕಾಗಿ ಅವರ ಜಯಂತಿಯನ್ನು ಆಚರಿಸದೆ, ಅವರ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ನಾವು ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ದಾಸ ಶ್ರೇಷ್ಠ ಸಂತನಾದ ಕನಕದಾಸರ ಭಾವಚಿತ್ರಕ್ಕೆ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಕನಕದಾಸರ ಕುರಿತು ಮಾತನಾಡಿದರು. ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
ಸಮೃದ್ದಿ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಭಕ್ತ ಕನಕದಾಸರ ಜಯಂತಿ
ಈ ದಿವಸ ವಾರ್ತೆ
ವಿಜಯಪುರ: ನಗರದ ಡಾ. ರಾಜಕುಮಾರ ಲೇಔಟನಲ್ಲಿರುವ ಸಮೃದ್ದಿ ಶಾಲೆಯ ವಿದ್ಯಾಥಿ ಗಳು ಹಾಗೂ ಶಿಕ್ಷಕವೃಂದದಿಂದ ಸಂತ ಭಕ್ತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದರು. ಸಂಸ್ಥೆಯ ಮುಖ್ಯಸ್ಥರಾದ ರಮೇಶ ಅವರು ಮಾತನಾಡಿ , ಸಂತ ಭಕ್ತ ಕನಕದಾಸರ ಜೀವನ ಹಾಗೂ ಅವರು ನಡೆದು ಬಂದ ದಾರಿ ಜೀವನದಲ್ಲಿ ಅಳವಡಿಸಿಕೊಂಡ ಮಾನವವೀಯ ಮೌಲ್ಯಗಳನ್ನು ಇಡೀ ಮಾನವ ಕುಲಕೋಟಿಗೆ ಸಾರಿ ಸಾರಿ ಹೇಳಿದ ಮಹಾನ್ ಸಂತ ಎಂದರು.
ಮುಖ್ಯ ಗುರುಮಾತೆ ಶ್ರೀಮತಿ ಕಾಂತಾ ಬಿಂದುರಾವ ಕುಲಕರ್ಣಿ ಮಾತನಾಡಿ ಭಕ್ತ ಕನಕದಾಸರು ಉಡುಪಿಯ ಶ್ರೀ ಕೃಷ್ಣನ ದಶ ನ ಪಡೆದ ಮಹಾನ ಘಟನೆಯನ್ನು ತುಂಬಾ ಸ್ವಾರಸ್ಯಕರವಾಗಿ ಮಕ್ಕಳ ಮನ ಮುಟ್ಟುವಂತೆ ತಿಳಿಸಿದರು. ಶ್ರೀಮತಿ ಸುನಂದಾ ಕುಲಕರ್ಣಿ ಭಾಗವಹಿಸಿದ್ದರು. ಹಾಗೆ ಈ ಒಂದು ಶುಭ ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಶಿರೋಳಕರ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೋಡಲಾಯಿತು .
ಈ ಒಂದು ಕಾರ್ಯಕ್ರಮದಲ್ಲಿ ಸಹಶಿಕ್ಷಕಿಯರಾದ ಸವಿತಾ ಭಜಂತ್ರಿ ರೇಖಾ ಶಿರೋಳಕರ , ಅರಚನಾ ಕನಮಡಿ ,ಭವಾನಿ ಪತ್ತಾರ, ಕವಿತಾ ರಾಠೋಡ, ಮಾಧವಿ ಗಡದಾನಿ, ವಿಷಾಲಾಕ್ಷಮಿ ಅಥಣಿ, ಮುಂತಾದವರು ಪಾಲ್ಗೊಂಡಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು
Tuesday, November 28, 2023
ಮೂಲ ಜಾನಪದ ಕಲೆಗಳನ್ನು ಪ್ರೊತ್ಸಾಹಿಸಬೇಕು : ಸಿ.ಬಿ.ನಾಟೀಕಾರ
ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-50 ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಾಂಸ್ಕೃತಿಕÀ ನೆಲಗಟ್ಟಿನ ಬೆಸುಗೆ ಬೆಸೆಯುವ ಅತ್ಯಮೂಲ್ಯವಾದ ಕಲೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಉಳಿಸಿಕೊಳ್ಳಬೇಕು ನಶಿಸಿ ಹೋಗುತ್ತಿರುವ ಕಲೆಗಳನ್ನು ಮುಂದಿನ ಯುವ ಪೀಳಿಗೆಗೆ ಕೊಂಡೊಯ್ಯಬೇಕು ಯುವ ಜನತೆಯಲ್ಲಿನ ಸೃಜನಾತ್ಮಕ ಕಲೆಗಳ ಪ್ರಸ್ತುತಪಡಿಸಲು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆ ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಾಟಕಕಾರರಾದ ಡಿ.ಎಚ್ ಕೊಲ್ಹಾರ ಮಾತನಾಡಿ, ಇಂದಿನ ಯುವಕರು ತಾಂತ್ರಿಕತೆಯೊAದಿಗೆ ಯುವಕರು ನಮ್ಮ ಕಲೆ, ಸಂಸ್ಕೃತಿ ಹಾಗೂ ಪಂರಪರೆ ಉಳಿಯುವಿಕೆಗೆ ಇಂತಹ ಕಾರ್ಯಕ್ರಮ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸಬೇಕು. ನಮ್ಮ ಪೂರ್ವಜರು ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು ಈಗಲೂ ಅದು ಮುಂದುವರೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಮುಂಚೆ ಗಾಂಧೀ ವೃತ್ತದಿಂದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ವರೆಗೆ ಗೊಂಬೆ ಹಾಗೂ ಡೊಳ್ಳು ಕುಣಿತದೊಂದಿಗೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಮಾರಿ ರಕ್ಷಂದ ತಿಳಗೊಳ ಅವರಿಂದ ಸುಗಮ ಸಂಗೀತ, ಕುಮಾರಿ ದಿವ್ಯಾ ಭಿಸೆ ಮತ್ತು ದೀಕ್ಷಾ ಭಿಸೆ ಸಮೂಹ ನೃತ್ಯ, ವಿನೋದ ಕಟಗೇರಿ ಜಾನಪದ ಗೀತೆ, ಕುಮಾರಿ ಶುಭನಂ ದಂದರಗಿ ಮತ್ತು ಸಂಗಡಿಗರಿAದ ಕರುಳಿನ ಕೂಗು ನಾಟಕ, ಬಬಲೇಶ್ವರದ ರಾಕೇಶ ಮಾಳಪ್ಪಗೋಳ ಹಾಗೂ ಸಂಗಡಿಗರಿAದ ಗೊಂಬೆ ಕುಣಿತ ಹಾಗೂ ಬಬಲೇಶ್ವರದ ಕಾಶಿಲಿಂಗ ಲೋಕೂರಿ ಅವರಿಂದ ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ವೇದಿಕೆ ಮೇಲೆ ಉಪನ್ಯಾಸಕಾದ ಎಸ್. ಲೇಸನ್ನವರ, ಮೇತ್ರಿ ಕಲಾವಿದರಾದ ವೀರೇಶ ವಾಲಿ, ಕಾಲಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರದ ಬಿ. ನಾಗರಾಜ ಸ್ವಾಗತಿಸಿ ವಂದಿಸಿದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು



