Thursday, December 7, 2023

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು : ಸಿಎಂ ಸಿದ್ಧರಾಮಯ್ಯ

ಈ ದಿವಸ ವಾರ್ತೆ

ಬೆಳಗಾವಿ: ಮಹಿಳೆಯರು  ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಅವರು ಇಂದು ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಗಾಟಿಸಿ ಅವರು ಮಾತನಾಡಿದರು.

ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು ಸಾಧ್ಯ. ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಕ್ಕು ಅದರಿಂದ ಜೀವನ ನಡೆಯಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ವಹಿಸುತ್ತಾರೆ. ಅವರು ಶ್ರಮಜೀವಿಗಳು. ಶೇ 50 ರಷ್ಟಿರುವ ಮಹಳೆಯರು ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ವರ್ಗ.  ಈ ವರ್ಗ ಶಿಕ್ಷಣ ದೊರೆತು ಆರ್ಥಿಕವಾಗಿ ಸಬಲರಾಗಬೇಕು. ಶಕ್ತಿ ವೃದ್ಧಿ ಮಾಡಲು ವಸ್ತು ಪ್ರದರ್ಶನ ಮಾರಾಟ ಮೇಳಗಳನ್ನು ಸರ್ಕಾರ ಏರ್ಪಾಡು ಮಾಡಿದೆ. ಉದ್ಯೋಗ ಸೃಷ್ಟಿಸಲು ಆರ್ಥಿಕ ನೆರವು , ತರಬೇತಿ, ಸ್ವಯಂ ಉದ್ಯೋಗಕ್ಕೆ ಶಕ್ತಿ ಅಗತ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು. ಸ್ಪರ್ಧಾತ್ಮಕ ಸಮಾಜದಲ್ಲಿ ನಾವೂ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ 3.48 ಲಕ್ಷ ಸ್ವಸಹಾಯ ಸಂಘಗಳಿವೆ. 39.30 ಲಕ್ಷ ಕುಟುಂಬಗಳು ಗ್ರಾಮೀಣ ಜೀವನೋಪಾಯಡಿಯಲ್ಲಿ  ಬರುತ್ತವೆ. ನಗರ ಪ್ರದೇಶದಲ್ಲಿ 33 ಸಾವಿರ ಸ್ವಸಹಾಯ ಸಂಘಗಳಿವೆ. 3.96 ಲಕ್ಷ ಕುಟುಂಬಗಳು ತೊಡಗಿಸಿಕೊಂಡಿವೆ. ಇಷ್ಟೊಂದು ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸರ್ಕಾರ ನೀಡಿದೆ ಎಂದರು.

12600 ಗುಂಪುಗಳಿಗೆ 1 ಕೋಟಿ ರೂ.ಗಳು:

ಸ್ವಸಹಾಯ ಸಂಘಗಳಿಗೆ ಪ್ರತಿ ಸ್ವಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳ ನೆರವು ನೀಡುತ್ತದೆ. 131 ಕೋಟಿ ರೂ.ಗಳನ್ನು ವ್ಯಯ ಮಾಡಿ 12600 ಗುಂಪುಗಳಿಗೆ ಈ ವರ್ಷ ಸಹಾಯ ಮಾಡಿದೆ. ಕಳೆದ ವರ್ಷ ವ್ಯಾಪಾರ ಮೇಳದಲ್ಲಿ 3 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ. ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣವನ್ನು ನೀಡಿದ್ದು ಮಹಿಳೆಯರು ಮನೆಗಳಿಗೆ ಸೀಮಿತವಾಗದೆ ರಾಜ್ಯದ ಮೂಲೆ ಮೂಲೆಗಳಿಗೂ ಹೋಗಬೇಕು. 100 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಜನ ಮಹಿಳೆಯರು ಬಸ್ಸುಗಳಲ್ಲಿ ಓಡಾಡಿದ್ದಾರೆ ಎಂದು ವಿವರಿಸಿದರು.

ಗೃಹ ಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಈವರೆಗೆ 1.17 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. 1.14 ಲಕ್ಷ ಮಹಿಳೆಯರಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. 170 ರೂ.ಗಳನ್ನು ಪ್ರತಿಯೊಬ್ಬರಿಗೂ ಅಕ್ಕಿಗೆ ಬದಲಾಗಿ ಕೊಡುತ್ತಿದ್ದೇವೆ. ಯುವನಿಧಿ ಯೋಜನೆಯ ಪ್ರಕ್ರಿಯೆ ನಡೆಯುತ್ತಿದ್ದು ಜನವರಿಯಲ್ಲಿ ಕೊಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮಹಿಳೆಯರು ದೇಶದ ಜಿಡಿಪಿಗೆ  ಕೊಡುಗೆಯನ್ನು ನೀಡಬೇಕು:

 ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಅವರೂ ದೇಶದ ಜಿಡಿಪಿಗೆ  ಕೊಡುಗೆಯನ್ನು ನೀಡಬೇಕು ಎಂದರು. ಆರು ತಿಂಗಳಲ್ಲಿ ಇವೆಲ್ಲವನ್ನೂ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಮಹಿಳೆಯರಿಗೆ ಹೆಚ್ಚು ಲಾಭ ಸಿಗಲು ಗುಣಮಟ್ಟದ ವಸ್ತುಗಳನ್ನು ತಯಾರು ಮಾಡಬೇಕು. ಅದಕ್ಕೆ ಅಗತ್ಯವಿರುವ ತಾಂತ್ರಿಕ ಜ್ಞಾನವನ್ನು ಕೊಡುವ ಕೆಲಸವನ್ನು ಇಲಾಖೆ ಮಾಡುತ್ತದೆ.   ಯುವಕ, ಯುವಕರಿಗೆ  ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಮಾಡಿದರೆ 2 ವರ್ಷಗಳಲ್ಲಿ ಉದ್ಯೋಗ ಸಿಗುವುದು ಸುಲಭವಾಗುತ್ತದೆ. ತರಬೇತಿ  ಮತ್ತು ಯುವನಿಧಿ ಎರಡೂ ಆದರೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆ ತರಲು ಸಾಧ್ಯವಾಗುತ್ತದೆ. ಯುವ ಶಕ್ತಿ, ಮಹಿಳೆಯರು ರಾಜ್ಯದ ಸಂಪತ್ತು. ಆದ್ದರಿಂದ ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್, ಅಧ್ಯಕ್ಷತೆಯನ್ನು ಶಾಸಕ ಆಸಿಫ್ ಸೇಠ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಅಧಿಕಾರಿಗಳು ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

08-12-2023 EE DIVASA KANNADA DAILY NEWS PAPER

ನ್ಯೂಯಾರ್ಕ್‍ನ ಬ್ರಾಂಕ್ಸ್‍ನ ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನಲ್ಲಿ ಪೋಸ್ಟ್ ಡಾಕ್ಟರಲ್ ರಿಸರ್ಚ್ ಫೆಲೋ ಆಗಿ ಡಾ. ನಿವೇದಿತಾ ಎಸ್. ಪೂಜಾರಿ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಬಯೋ ಇನ್ಫಮ್ರ್ಯಾಟಿಕ್ಸ್‍ನಲ್ಲಿ ಪಿಎಚ್‍ಡಿ ಗಳಿಸಿದ ಡಾ. ನಿವೇದಿತಾ ಎಸ್. ಪೂಜಾರಿ ನ್ಯೂಯಾರ್ಕ್‍ನ ಬ್ರಾಂಕ್ಸ್‍ನ ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನಲ್ಲಿ ಪೆÇೀಸ್ಟ್ ಡಾಕ್ಟರಲ್ ರಿಸರ್ಚ್ ಫೆಲೋ ಆಗಿ ಆಯ್ಕೆಯಾಗಿದ್ದಾರೆ.   

ಡಾ.ನಿವೇದಿತಾ ಅವರು ಡಾಕ್ಟರೇಟ್ ಸಂಶೋಧನೆಯನ್ನು ಡಾ. ಜಾಯ್ ಎಚ್. ಹೊಸಕೇರಿ ಅವರ ಮಾರ್ಗದರ್ಶನದಲ್ಲಿ ಕೈಕೊಂಡಿದ್ದು, ಮೈನರ್ ಮಿಲೆಟ್‍ಗಳ ಆಂಟಿ-ಹೈಪರ್ಲಿಪಿಡೆಮಿಕ್ ಪರಿಣಾಮಗಳನ್ನು ಮತ್ತು ಅವುಗಳ ಮಾಲ್ಟ್ ಪೆÇ್ರೀಟೀನ್‍ಗಳನ್ನು ಪ್ರತಿಲೇಖನ ವಿಶ್ಲೇಷಣೆಯ ಮೂಲಕ ಸಂಶೋಧನೆ ಕೈಕೊಂಡಿದ್ದರು. 

ಈಗ, ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನಲ್ಲಿ, ಡಾ. ನಿವೇದಿತಾ ಅವರು ನ್ಯೂರೋಟ್ರೋಪಿಕ್ ಹರ್ಪಿಸ್ ವೈರಸ್ ಅಸೆಂಬ್ಲಿ ಮತ್ತು ಟ್ರಾಫಿಕಿಂಗ್‍ನ ಮೈಕ್ರೋಸ್ಕೋಪಿಕ್ ಇಮೇಜಿಂಗ್ ವಿಶ್ಲೇಷಣೆ ಕುರಿತು ಸಂಶೋಧನೆ ನಡೆಸಲಿದ್ದು, ಪ್ರಾಯೋಜಕ ಸಂಸ್ಥೆಯಾದ ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್ ಡಾ.ನಿವೇದಿತಾ ಅವರಿಗೆ $58,179 ಡಾಲರ್ ಫೆಲೋಶಿಪ್ ನೀಡಿದೆ. 

ಡಾ. ನಿವೇದಿತಾ ಅವರು ವೈಜ್ಞಾನಿಕ ಜ್ಞಾನವನ್ನು ಮುಂದುವರೆಸಲು ಅವರ ಸಮರ್ಪಣೆ, ಅವರ ಅಲ್ಮಾ ಮೇಟರ್ ಮತ್ತು ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನ ಬೆಂಬಲದೊಂದಿಗೆ, ಬಯೋಇನ್‍ಫಮ್ರ್ಯಾಟಿಕ್ಸ್ ಮತ್ತು ನ್ಯೂರೋಟ್ರೋಪಿಕ್ ವೈರಸ್ ಸಂಶೋಧನೆಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡುವ ಭರವಸೆ ಇದೆ ಎಂದು ಡಾ.ಜಾಯ್ ಹೊಸಕೇರಿ ಆಶಯ ವ್ಯಕ್ತಪಡಿಸಿದ್ದಾರೆ. 

ಡಾ.ನಿವೇದಿತಾ ಅವರ ಸಾಧನೆಗೆ ವಿವಿಯ ಕುಲಪತಿ ಡಾ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ ಅವರು ಅಭಿನಂದಿಸಿದ್ದಾರೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ರೇಖಾಗೆ ಪಿಎಚ್.ಡಿ ಪದವಿ

ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರೇಖಾ ಗಣಿಹಾರ ಅವರು ಸಲ್ಲಿಸಿದ್ದ “ಚೈಲ್ಡ್ ಮ್ಯಾರೇಜ್ ಆಂಡ್ ರಿಪ್ರೊಡಕ್ಟಿವ್ ಹೆಲ್ತ್: ಎ ಸೋಷಿಯೊಲಾಜಿಕಲ್ ಸ್ಟಡಿ ಇನ್ ವಿಜಯಪುರ ಡಿಸ್ಟ್ರಿಕ್ಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ  ಪದವಿ ನೀಡಿದೆ. 

ರೇಖಾ ಗಣಿಹಾರ ಅವರು ಸಮಾಜಶಾಸ್ತ್ರ ವಿಭಾಗದ ಡಾ.ಎಮ್.ಪಿ.ಬಳಿಗಾರ ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರೇಖಾ ಗಣಿಹಾರ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ  ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Tuesday, December 5, 2023

ರಾಜಗುರು ಫುಡ್ಸ್ ಗೋದಾಮಿನ ದುರಂತ ರಾಜ್ಯ ಸರ್ಕಾರದಿಂದ ಮೃತ ಕುಟುಂಬಗಳಿಗೆ 2ಲಕ್ಷ ರೂ.ಗಾಯಾಳುಗಳಿಗೆ 50 ಸಾವಿರ ರೂ : -ಸಚಿವ ಡಾ.ಎಂ.ಬಿ.ಪಾಟೀಲ

ವಿಜಯಪುರ : ತಾಲೂಕಿನ ಅಲಿಯಾಬಾದ್ ಗ್ರಾಮದ ಕೈಗಾರಿಕಾ ಪ್ರದೇಶದ ಬ್ಲಾಕ್-2ರಲ್ಲಿರುವ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ಸಾವಿಗೀಡಾದ 7 ಜನ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕಿಶೋರ ಜೈನ್ ಎಂಬುವರ ಒಡೆತನದ ರಾಜಗುರು ಫುಡ್ಸ್ ವ್ಯಾಪಾರ ಕೇಂದ್ರದಲ್ಲಿ 500 ರಿಂದ 600 ಟನ್ ಸಾಮಥ್ರ್ಯದ 3 ಸರಣಿ ಟ್ಯಾಂಕ್‍ಗಳಿದ್ದು, ಈ ಟ್ಯಾಂಕ್‍ಗಳ ಪೈಕಿ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಕುಸಿದು ಬಿದ್ದಿರುವುದರಿಂದ ಟ್ಯಾಂಕ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಇದರಲ್ಲಿ 8 ಜನ ಕಾರ್ಮಿಕರ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಿ ಗಾಯಾಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ ಹಾಗೂ ಈ ಘಟನೆಯಲ್ಲಿ  ದುರಾದೃಷ್ಟವಶಾತ್ 7 ಜನ ಕಾರ್ಮಿಕರು ಮೃತಪಟ್ಟಿದ್ದು, ಮೃತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಿಸಿದ್ದು, ವ್ಯಾಪಾರ ಕೇಂದ್ರದ ಮಾಲೀಕರಿಂದ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ರಾಜ್ಯದ ಯಾವುದೇ ಕೈಗಾರಿಕೆಗಳಲ್ಲಿ ಅನಾಹುತಕ್ಕೆ ಆಸ್ಪದ ನೀಡದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಹಾಗೂ ಸುರಕ್ಷಾ ಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ಹಾಗೂ ಕೈಗಾರಿಕಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳುವಂತೆ ಕ್ರಮ ವಹಿಸಲಾಗುವುದು. ವ್ಯಾಪಾರ ಕೇಂದ್ರದಲ್ಲಿ ಆಗಿರುವ ಘಟನೆಗೆ ತಾಂತ್ರಿಕ ದೋಷ ಮತ್ತು ನ್ಯೂನ್ಯತೆಗಳ ಕುರಿತು ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. 

ದಿನಾಂಕ : 04-12-2023 ರಂದು ಸಂಜೆ 5 ಗಂಟೆಗೆ ಈ ಘಟನೆ ಸಂಭವಿಸಿದ್ದು, ಘಟನೆ ಮಾಹಿತಿ ದೊರೆತ ನಂತರ ಸಚಿವರು ಬೆಳಗಾವಿಯಿಂದ ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಆಗಮಿಸಿ, ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಂದ ರಕ್ಷಣಾ ಕಾರ್ಯಾಚರಣೆ ಹಾಗೂ ಗಾಯಾಳುಗಳ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು. ರಕ್ಷಣಾ ಕಾರ್ಯಾಚರಣೆಗೆ ಸೂಕ್ತ ನಿರ್ದೇಶನ ನೀಡಿದರು. ದುರಂತದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತ ವೈದ್ಯೋಪಚಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೃತಪಟ್ಟ ಕಾರ್ಮಿಕರು : ಗೋದಾಮಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 36 ವರ್ಷದ ರಂಭಿತ, 20 ವರ್ಷದ ರಾಜೇಶ ಮುಖಿಯಾ, 40 ವರ್ಷದ ಶಂಭು ಮುಖಿಯಾ, 40 ವರ್ಷದ ರಾಮಬಾಲಕ, 55 ವರ್ಷದ ಲುಕೋ ಯಾಧವ, 18 ವರ್ಷದ ಕೃಷ್ಣಕುಮಾರ ಮುಖಿಯಾ ಹಾಗೂ 33 ವರ್ಷದ ಧುಲಾಚಂದ ಮುಖಿಯಾ ಎಂಬ ಕಾರ್ಮಿಕರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಘಟನೆಯ ವಿವರ : ತಾಲೂಕಿನ ಅಲಿಯಾಬಾದ ಕೈಗಾರಿಕಾ ಪ್ರದೇಶದಲ್ಲಿ ರಾಜಗುರು ಫುಡ್ಸ್ ಎಂಬ ವ್ಯಾಪಾರ ಕೇಂದ್ರದಲ್ಲಿ 40 ರಿಂದ 50 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರದಲ್ಲಿ ಅವಶ್ಯಕತೆಯನುಸಾರ 100 ರಿಂದ 150 ಕಾರ್ಮಿಕರನ್ನು ಗುತ್ತಿಗೆ  ಪಡೆಯಲಾಗುತ್ತದೆ. ಡಿ.4ರಂದು ಸಂಜೆ 5 ಗಂಟೆಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ  ಮೆಕ್ಕೆಜೋಳ ತುಂಬಿರುವ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಬಿದ್ದಿದ್ದು, ಕಾರ್ಮಿಕರು ಭಯಭೀತರಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಅಂದಾಜು 50 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ   8 ಜನ ಕಾರ್ಮಿಕರಿಗೆ ಅಲ್ಲಿಂದ ಪಾರಾಗಲು ಸಾಧ್ಯವಾಗದ ಕಾರಣ, ಮೆಕ್ಕೆಜೋಳದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಘಟನೆ ಕುರಿತು ಸಂಜೆ 6 ಗಂಟೆಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಅಗ್ನಿಶಾಮಕ, ಮಹಾನಗರಪಾಲಿಕೆ ಪೋಲಿಸ್ ಸಿಬ್ಬಂದಿಯೊಂದಿಗೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವ್ಯಕ್ತಿಯನ್ನು ರಕ್ಷಿಸಿ ಅವರನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಿದ್ದಾರೆ. ನಂತರ ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ತಂಡಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಅಂದಾಜು 12 ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಸಿಲುಕಿಕೊಂಡಿರುವ 7 ಮೃತ ದೇಹಗಳನ್ನು  ಹೊರತೆಗೆಯಲಾಗಿದೆ.

ಮೃತ ದೇಹಗಳನ್ನು ಹತ್ತಿರದ ವಿಮಾನ ನಿಲ್ಧಾಣದಿಂದ ಏರ್ ಲಿಪ್ಟ್ ಮಾಡಿ ಪಾಟ್ನಾ ವಿಮಾನ ನಿಲ್ಧಾಣದಕ್ಕೆ ತಲುಪಿದ ನಂತರ ಮೃತ ದೇಹಗಳನ್ನು ಮೃತರ ಮನೆಯವರೆಗೆ ತಲುಪಿಸವ ವ್ಯವಸ್ಥೆಯನ್ನು ಮಾಡಲಾಗಿದೆ. ಸದರಿ ಕಾರ್ಯಾಚರಣೆಯಲ್ಲಿ  ಜೆಸಿಬಿ ಮತ್ತು ಹಿಟಾಚಿಗಳನ್ನು ಬಳಸಲಾಗಿದ್ದು, 24 ಜನ ಬೆಳಗಾವಿಯಿಂದ ಹಾಗೂ 26 ಜನ ಕಲಬುರಗಿಯಿಂದÀ ಎಸ್‍ಡಿಆರ್‍ಎಫ್ ತಂಡಗಳು, 30ಜನರನ್ನೊಳಗೊಂಡ ಮಹಾರಾಷ್ಟ್ರದ ಪುಣೆಯಿಂದ ಎನ್‍ಡಿಆರ್‍ಎಫ್ ತಂಡ ಭಾಗವಹಿಸಿತ್ತು. 

ಸಚಿವರಿಂದ ಶ್ರದ್ಧಾಂಜಲಿ : ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆ  ಆವರಣಕ್ಕೆ ತೆರಳಿ ವಿಜಯಪುರ ಗೋದಾಮಿನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 

ಸಚಿವರಿಂದ ಪ್ರಶಂಸೆ ಪತ್ರ : ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಡೆಪ್ಯೂಟಿ ಕಮಾಂಡೆಂಟರ್ ಆರ್.ಅರವಿಂದ ನೇತೃತ್ವದ ಬೆಳಗಾವಿ ಹಾಗೂ ಡೆಪ್ಯೂಟಿ ಕಮಾಂಡೆಂಟ್ ಸಲಾವುದ್ದೀನ್ ನೇತೃತ್ವದ ಕಲ್ಬುರ್ಗಿ  ಎಸ್‍ಡಿಆರ್‍ಎಫ್ ತಂಡ ಹಾಗೂ ಅನೀಲ ತಾಲಕೋಟ್ರಾ ನೇತೃತ್ವದ ಎನ್‍ಡಿಆರ್‍ಎಫ್ ತಂಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವನೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ, ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಬಿಎಲ್‍ಡಿಇ ಫಾರೆನ್ಸಿಕ್ ಎಚ್‍ಓಡಿ ಸೇರಿದಂತೆ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲ ಇಲಾಖೆ ಸಿಬ್ಬಂದಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಕೃತಜ್ಞತೆ ಸಲ್ಲಿಸಿ ಪ್ರಶಂಸೆ ಪತ್ರ ನೀಡಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.


06-12-2023 EE DIVASA KANNADA DAILY NEWS PAPER