Tuesday, January 16, 2024
Monday, January 15, 2024
Sunday, January 14, 2024
ವಿಜಯಪುರ ಜಿಲ್ಲೆಯ ಶ್ರೀ ಶ್ರೀ ಪೂಜ್ಯ ಗೋಪಾಲ ನಂದುಲಾಲ ಮಹಾರಾಜಗೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರೋಹಣ ಕಾರ್ಯಕ್ರಮಕ್ಕೆ ಆಹ್ವಾನ
ವಿಜಯಪುರ: ದಿನಾಂಕ : 22-01-2024 ರಂದು ಅಯೋಧ್ಯಾದಲ್ಲಿನ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರೋಹಣಕ್ಕೆ ವಿಜಯಪುರ ಜಿಲ್ಲೆಯಿಂದ ಶ್ರೀ ಪೂಜ್ಯ ಗೋಪಾಲ ನಂದುಲಾಲ ಮಹಾರಾಜ ಅವರನ್ನು ಆಹ್ವಾಸಲಾಗಿದೆ.
ಈ ಸಂದರ್ಭ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಬಂಜಾರ ಸಮಾಜಕ್ಕೂ ಪ್ರಾತಿನಿಧ್ಯ ನೀಡಿ ಆಹ್ವಾನ ನೀಡಿದ್ದು ಖುಷಿಯ ಸಂಗತಿ. ರಾಮ ಮಂದಿರದ ಟ್ರಸ್ಟ್ ಸಮಿತಿಯವರಿಗೆ ಗೌರವಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ. ವಿಜಯಪುರ ಜಿಲ್ಲೆಯ ತೊರವಿ ತಾಂಡಾ ಎಲ್.ಟಿ.ನಂ.1 ರಿಂದ ಅಯೋಧ್ಯೆಗೆ ಹೋಗುತ್ತಿರುವುದು ನನ್ನ ಸೌಭಾಗ್ಯ. ಸಂತ ಸೇವಾಲಾಲ ಮಹಾರಾಜರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶೀರ್ವಾದವೇ ಕಾರಣ ಎನ್ನಲು ಹೆಮ್ಮೆ ಎನಿಸುತ್ತಿದೆ. ಶ್ರೀ ರಾಮನ ದರ್ಶನಕ್ಕೆ ನಾನೂ ಕಾತರನಾಗಿದ್ದೇನೆ. ಸಮಸ್ತ ರಾಮ ಭಕ್ತರಿಗೆಲ್ಲರಿಗೂ ಮನಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು
ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಋಷಿ ಆನಂದ ಅಧಿಕಾರ ಸ್ವೀಕಾರ
ಈ ದಿವಸ ವಾರ್ತೆ
ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯತಿಯ ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಋಷಿ ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಶಿಂಧೆ ಅವರು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಂಡಿರುವುದರಿಂದ ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ಋಷಿ ಆನಂದ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ವರ್ಗಾವಣೆಗೊಂಡು ಆಗಮಿಸಿದ ಋಷಿ ಆನಂದ ಅವರನ್ನು ನಿರ್ಗಮಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ಜಿಲ್ಲಾ ಪಂಚಾಯತಿಯ ವಿವಿಧ ಅಧಿಕಾರಿಗಳು, ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು


