Sunday, February 4, 2024

38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ದಾವಣಗೆರೆ ಫೆ 3: ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.  

KUWJ ಆಯೋಜಿಸಿದ್ದ 38 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 'ಸರ್ಕಾರ ಮತ್ತು ಮಾಧ್ಯಮ' ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. 

ಈಗ ಅಧಿಕಾರಸ್ಥರ ಮತ್ತು ಪತ್ರಕರ್ತರ ನಡುವೆ ಸಂಪರ್ಕ ಅನಿವಾರ್ಯ ಅನ್ನುವ ಸ್ಥಿತಿ ಬಂದಿದೆ. ಮೊದಲೆಲ್ಲಾ ಪತ್ರಕರ್ತರು ಅಧಿಕಾರಸ್ಥರ ಜತೆ ನಿಕಟ ಸಂಪರ್ಕ ಹೊಂದುವುದಕ್ಕೆ ಬಹಳ ಮುಜುಗರ ಅನುಭವಿಸುತ್ತಿದ್ದರು ಎಂದು ವಿವರಿಸಿದರು. 

ಈಗ ಜಾಹಿರಾತು ತರುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಆಗಿಬಿಟ್ಟಿದೆ. ತನಿಖಾ ಪತ್ರಿಕೋದ್ಯಮ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದ ಹೊಣೆ ಹಿಂದಕ್ಕೆ ಸರಿದಿದೆ. ಸ್ವಾತಂತ್ರ್ಯ ನಂತರದ ಭಾರತೀಯ ಪತ್ರಿಕೋದ್ಯಮ ಅಭಿವೃದ್ಧಿ ಮತ್ತು ಜನಮುಖಿ ಪತ್ರಿಕೋದ್ಯಮವನ್ನು ಪ್ರಥಮ ಆಧ್ಯತೆಯನ್ನಾಗಿಸಿಕೊಂಡಿತ್ತು. ಈಗ ಬದಲಾದ ಸನ್ನಿವೇಶದಲ್ಲಿ, ಜವಾಬ್ದಾರಿ ಮತ್ತು ಹೊಣೆಗಾರಿಕೆಗಳೂ ಬದಲಾಗುತ್ತಿವೆ ಎಂದರು. 

ಪತ್ರಕರ್ತರು ಮೊದಲು ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯ, ಯೋಗಕ್ಷೇಮದ ಕಡೆಗೂ ಗಮನ ಹರಿಸಬೇಕು. ಕೆಲಸದ ಒತ್ತಡದ ನಡುವೆಯೂ ಈ ದಿಕ್ಕಿನಲ್ಲೂ ಗಮನ ಹರಿಸಿ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಮತ್ತು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಪತ್ರಕರ್ತ ಸಮುದಾಯದ ವೃತ್ತಿಪರತೆ ಮತ್ತು ಪ್ರಗತಿಗೆ ನೀಡಿದ ನೆರವುಗಳನ್ನು ಪಟ್ಟಿ ಮಾಡಿದ ಕೆ.ವಿ.ಪ್ರಭಾಕರ್ ಅವರು, ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕುರಿತು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಪತ್ರಿಕಾ ವಿತರಕರನ್ನು ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು. 

KUWJ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಸೇರಿ ಸಂಘದ ಹಲವು ಪದಾಧಿಕಾರಿಗಳು ವೇದಿಲೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಸಾಧನೆ ಮಾಡಬಹುದು: ರಾಜೇಶ್ವರಿ ಗಾಯಕವಾಡ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ, ಫೆ. 04: ಸತತ ಪರಿಶ್ರಮ, ಶ್ರದ್ಧೆ ಮತ್ತು ಶಿಸ್ತಿನಿಂದ ಕ್ರೀಡೆಗಳಲ್ಲಿ ಉನ್ನತ ಸಾಧನೆ ಮಾಡಬಹುದು.  ಇಲ್ಲಿ ಯಾವುದೇ ಶಾರ್ಟ್ ಕಟ್ ಇರುವುದಿಲ್ಲ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಹೇಳಿದರು.

ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಇಂದು ರವಿವಾರ ಆಯೋಜಿಸಲಾಗಿದ್ದ ಬಿ. ಎಲ್. ಡಿ. ಇ ಸಂಸ್ಥೆಯ 9ನೇ ಅಂತರ ಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.  

ಕ್ರೀಡಾಪಟುಗಳು ತಾವು ಇಷ್ಟಪಡುವ ಕ್ರೀಡೆಯಲ್ಲಿ ಯಶಸ್ವಿಯಾಗಬೇಕಾದರೆ ಕಠಿಣ ಪರಿಶ್ರಮ, ಸಮರ್ಪಣೆ ಮನೋಭಾವ, ಕ್ರೀಡಾಸ್ಪೂರ್ತಿ ಮುಖ್ಯವಾಗಿದೆ.  ಇಲ್ಲಿ ಯಾವುದೇ ಅಡ್ಡಮಾರ್ಗಗಳ ಮೂಲಕ ಸಾಧನೆ ಮಾಡಲು ಸಾಧ್ಯವಿಲ್ಲ.  ಶ್ರಮಪಟ್ಟರೆ ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.  ಫೆಬ್ರವರಿ 23ರಿಂದ ಬೆಂಗಳೂರಿನಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್) ಪ್ರಾರಂಭವಾಗುತ್ತಿದೆ.  ವಿಜಯಪುರ ಜಿಲ್ಲೆಯ ಜನ ನನಗೆ ಬೆಂಬಲ ನೀಡಬೇಕು ಎಂದು ರಾಜೇಶ್ವರ ಗಾಯಕವಾಡ ಮನವಿ ಮಾಡಿದರು.  

ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಸ್ನೇಹ ಬೆಳೆಸಿಕೊಳ್ಳಲು, ನಾಯಕತ್ವ ಗುಣ ಅಳವಡಿಸಿಕೊಳ್ಳಲು ಹಾಗೂ ಸಾಧನೆ ಮಾಡಲು ಅವಕಾಶ ಕಲ್ಪಿಸುತ್ತವೆ.  ಬಿ.ಎಲ್.ಡಿ.ಇ ಸಂಸ್ಥೆ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಮಾನವೀಯತೆ ನಿಲುವಿನ ಶಿಕ್ಷಣ ನೀಡುತ್ತಿದೆ.  ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಎಲ್ಲ ಕ್ಷೇತ್ರಗಳಲ್ಲಿ ಕ್ರೀಡಾಸ್ಪೂರ್ತಿ ಮತ್ತು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಉತ್ತಮ ಸಾಧನೆ ಮಾಡಬೇಕು.  ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ ಅವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯಕ್ಕೆ ಪೂರಕವಾದ ಎಲ್ಲ ಚಟುವಟಿಕೆಗಳಿವೆ ಉತ್ತೇಜನ ನೀಡುತ್ತಿದ್ದಾರೆ ಎಂದು ಹೇಳಿದರು.

ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾ ಸಂಸ್ಕೃತಿಗೆ ಉತ್ತೇಜನ ನೀಡಲು ಡಾ. ಸಿ. ಆರ್. ಬಿದರಿ ಸ್ಮರಣೆಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.  ಈ ವರ್ಷ ಬಿ.ಎಲ್.ಡಿ.ಇ ಸಂಸ್ಥೆಯ 17 ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ್ದಾರೆ.  ರಾಜೇಶ್ವರಿ ಗಾಯಕವಾಡ ಕೂಡ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ವಿದ್ಯಾರ್ಥಿನಿಯಾಗಿರುವುದು ಎಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು.

ಬಿ.ಎಲ್.ಡಿ.ಇ ಸಂಸ್ಷೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಕ್ರೀಡಾ ಧ್ವಜಾರೋಹಣ ಮಾಡಿದರು.  ರಾಜೇಶ್ವರಿ ಗಾಯಕವಾಡ ಬಲೂನು ಗಾಳಿಯಲ್ಲಿ ಹಾರಿ ಬಿಡುವ ಮೂಲಕ ಕ್ರೀಡಾಪಟುಗಳಿಗೆ ಶುಭ ಕೋರಿದರು.  ಕ್ರೀಡಾಪಟುಗಳಾದ ಗೌರಿ ಹಿರೇಮಠ ಮತ್ತೀತರು ಕ್ರೀಡಾ ಜ್ಯೋತಿಯನ್ನು ರಾಜೇಶ್ವರಿ ಗಾಯಕವಾಡ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ಡಾ. ಸಿ. ಆರ್. ಬಿದರಿ ಕುಟುಂಬದ ಪರವಾಗಿ ಅವರ ಸೊಸೆ ಮತ್ತು ಖ್ಯಾತ ವೈದ್ಯೆ ಡಾ. ಶೈಲಜಾ ಆರ್. ಬಿದರಿ, ಉಪಕುಲಪತಿ ಡಾ. ಆರ್. ಎಸ್. ಮುಧೋಳ ಹಾಗೂ ಮುಖ್ಯ ಆಡಳಿತಾಧಿಕಾರಿ ಆರ್. ಬಿ. ಕೊಟ್ನಾಳ ಅವರು ರಾಜೇಶ್ವರಿ ಗಾಯಕವಾಡ ಅವರನ್ನು ಸನ್ಮಾನಿಸಿದರು.  

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಸಂಸ್ಥೆಯ ಆಡಳಿತಾಧಿಕಾರಿ ಬಿ. ಆರ್. ಪಾಟೀಲ, ಎಸ್. ಎಚ್. ಲಗಳಿ, ದೈಹಿಕ ಉಪನಿರ್ದೇಶ ಕೈಲಾಸ ಹಿರೇಮಠ, ಭಾರತಿ ಪಾಟೀಲ, ರಾಜೇಶ್ವರಿ ಗಾಯಕವಾಡ ಕುಟುಂಬ ಸದಸ್ಯರು, ಎಂಜಿನಿಯರಿಂಗ್ ಕಾಲೇಜಿನ ಪಿ. ವಿ. ಮಾಗಿ, ಉಮೇಶ ದೀಕ್ಷಿತ, ರಮೇಶ ಜೀರಗಾಳ, ಡಾ. ನವೀನ ದೇಸಾಯಿ, ಪ್ರೊ. ಗಿರೀಶ ಕುಲಕರ್ಣಿ, ಐ. ಎಸ್. ಇಕ್ಕಳಕಿ, ಡಾ. ಎ. ಎಸ್. ಜಾಧವ, ವೈ. ಎ. ಕುಲಕರ್ಣಿ, ಪ್ತೊ. ಎಸ್. ಎಸ್. ಚಪ್ಪಾರ, ಪ್ರೊ. ಶಿಲ್ಪಾ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.  

ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.  ಕಾಲೇಜಿನ ಉಪಪ್ರಾಚಾರ್ಯೆ ಗೀತಾಂಜಲಿ ಪಾಟೀಲ ಸ್ವಾಗತಿಸಿದರು.  ಕ್ರೀಡಾಪಟು ನೀಲಮ್ಮಾ ರಾಠೋಡ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.  ಕಾಲೇಜಿನ ಕ್ರೀಡಾ ನಿರ್ದೇಶಕ ಐ. ಎಸ್. ಇಕ್ಕಳಕಿ ವಂದಿಸಿದರು.  ಆಶಾ ಎಂ. ಪಾಟೀಲ ನಿರೂಪಿಸಿದರು.  

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, February 2, 2024

ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ


ಈ ದಿವಸ ವಾರ್ತೆ

ದಾವಣಗೆರೆ ಫೆ 3 : ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

 ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡಿದರು. 

ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು. 

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು. 

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ.  ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ , ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು. 

ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದು ವಿವರಿಸಿದರು. 

ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು. 

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಆಶಿಸಿದರು. 



ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು KUWJ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು. 

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಭರವಸೆ ನೀಡಿದರು.

ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇ.ಎಂ.ಮಂಜುನಾಥ್ ಸಮ್ಮೇಳನದ ಆಶಯಗಳನ್ನು ಆಡಿದರು.


ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ: ಸಿ.ಎಂ. ಸಿದ್ಧರಾಮಯ್ಯ



ಈ ದಿವಸ ಕನ್ನಡ  ದಿನ ಪತ್ರಿಕೆ ವಾರ್ತೆ

ವಿಜಯಪುರ ಫೆ 2: ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು ಎಂದು ವಿವರಿಸಿದರು. 



 ಆದರೆ, ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ "ಇವ ನಮ್ಮವ ಇವ ನಮ್ಮವ" ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. 

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. 


ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ.  ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಮಾರ್ಚ್ 20 ರಂದು ನಾನು ಮುದ್ಸೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇ ಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ಸೇವೆ. ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದು ವಿವರಿಸಿದರು. 

ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು

ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ವ್ಹಿ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನಿಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ, KPCC ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡ ರಜಾಕ ಬಾಗೇವಾಡಿ ಸೇರಿ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, February 1, 2024

ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಮ್ಮ ಬನ್ನಿಗಿಡ ಆಯ್ಕೆ


ವಿಜಯಪುರ : ವಿಜಯಪುರ ಜಿಲ್ಲೆಯ ಕೊಳೂರಗಿ ಗ್ರಾಮದ ಗ್ರಾಮ ಪಂಚಾಯತ ಸದಸ್ಯೆ ಸಾಮಾಜಿಕ ಹೋರಾಟಗಾರರು ಖ್ಯಾತ ಡೊಳ್ಳಿನ ಹಾಡಿನ ಗಾಯಕರಾದ ಶ್ರೀಮತಿ ಸಿದ್ದಮ್ಮ ಬನ್ನಿಗಿಡ ಇವರನ್ನು ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಇದರ ರಾಷ್ಟಿçÃಯ ಅಧ್ಯಕ್ಷರು ಹಾಗೂ  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಡಾ. ಮೋಹನರಾವ ನಲವಡೆ ಅವರು ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.

ಶ್ರೀಮತಿ ಸಿದ್ದಮ್ಮ ಬನ್ನಿಗಿಡ ಅವರು ಈಗಾಗಲೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತಾ ಶೋಷಿತರ ನೊಂದವರ ಪರವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಅಲ್ಲದೆ, ಕರ್ನಾಟಕ ಹಾಗೂ ಮಹಾರಾಷ್ಟç ರಾಜ್ಯಗಳಲ್ಲಿ ಡೊಳ್ಳಿನ ಹಾಡಿನ ಮುಖಾಂತರ ಜನರಲ್ಲಿ ಮೂಢನಂಬಿಕೆಗಳ ಬಗ್ಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ ಈ ಎಲ್ಲಾ ಕಾರ್ಯಗಳನ್ನು ಪರಿಗಣಿಸಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ರಾಷ್ಟಿçÃಯ ಅಧ್ಯಕ್ಷರು ಶ್ರೀಮತಿ ಸಿದ್ದಮ್ಮ ಬನ್ನಿಗಿಡ ಅವರಿಗೆ ಜಿಲ್ಲಾ ಅಧ್ಯಕ್ಷ ಉನ್ನತ ಹುದ್ದೆಯ ಜವಾಬ್ದಾರಿ ನೀಡಿದ್ದಾರೆ. ಸಿದ್ದಮ್ಮ ಅವರಿಗೆ ಈ ಹುದ್ದೆ ದೊರತಿದ್ದಕ್ಕೆ ಅವರ ಸ್ನೇಹಿತರು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಶಶಿಕಾಂತ ಮೆಂಡೇಗಾರ ಆಯ್ಕೆ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ:

ವಿಜಯಪುರ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ವಿಜಯಪುರದ ಪತ್ರಕರ್ತ ಶಶಿಕಾಂತ ಮೆಂಡೇಗಾರ ಆಯ್ಕೆ ಆಗಿದ್ದಾರೆ.

ಅತ್ಯುತ್ತಮ ತನಿಖಾ ವರದಿಗೆ ಕೊಡಮಾಡುವ ಟಿ.ಕೆ.ಮಲಗೊಂಡ ಪ್ರಶಸ್ತಿಯನ್ನು ಇದೇ ಫೆ.3 ಹಾಗೂ ಫೆ.4 ರಂದು ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, January 31, 2024

ರೇಷ್ಮಾ, ಇಂದಿರಾಬಾಯಿಗೆ ಪಿಎಚ್.ಡಿ ಪದವಿ

ರೇಷ್ಮಾ ಚೀರಲದಿನ್ನಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರೇಷ್ಮಾ ಚೀರಲದಿನ್ನಿ ಅವರು ಸಲ್ಲಿಸಿದ್ದ “ಎಜ್ಯುಕೇಶನ್ ಕಾಂಟ್ರಿಬ್ಯೂಶನ್ಸ್ ಆಫ್ ಮೌಲಾನಾ ಅಬ್ದುಲ್ ಕಲಾಮ ಆಜಾದ ಆಂಡ್ ಇಟ್ಸ್ ರೆಲೆವನ್ಸ್ ಟು ಪ್ರಸೆಂಟ್ ಸಿನಾರಿಯೋ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.

ರೇಷ್ಮಾ ಚೀರಲದಿನ್ನಿ ಅವರು ಶಿಕ್ಷಣ ವಿಭಾಗದ ಪ್ರೊ.ಬಿ.ಎಲ್.ಲಕ್ಕಣ್ಣವರ್ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರೇಷ್ಮಾ ಚೀರಲದಿನ್ನಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.




ಇಂದಿರಾಬಾಯಿ ಬೀರಲದಿನ್ನಿ 

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಇಂದಿರಾಬಾಯಿ ಬೀರಲದಿನ್ನಿ ಅವರು ಸಲ್ಲಿಸಿದ್ದ “ಇನ್-ಸಿಲಿಕೊ ಡ್ರಗ್ ಡಿಸೈನಿಂಗ್ ಸ್ಟಡೀಸ್ ಆಫ್ ಪೈಟೋಕೆಮಿಕಲ್ಸ್ ಐಸೋಲೇಟೆಡ್ ಫ್ರಮ್ ಲೂನಿಯಾ ಪ್ರೊಕುಂಬೆನ್ಸ್ ಅಗೆನೆಸ್ಟ್ ಡೈಯಬಿಟೀಸ್ ಮೆಲಿಟಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. 

ಇಂದಿರಾಬಾಯಿ ಬೀರಲದಿನ್ನಿ ಅವರು ಜೈವಿಕ ಮಾಹಿತಿ ವಿಭಾಗದ ಪ್ರೊ.ಜಾಯ್.ಹೆಚ್.ಹೊಸ್ಕೇರಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಇಂದಿರಾಬಾಯಿ ಬೀರಲದಿನ್ನಿ ಅವರನ್ನು ಕುಲಪತಿ 

ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು