Friday, May 3, 2024

04-05-2024 EE DIVASA KANNADA DAILY NEWS PAPER

03-05-2024 EE DIVASA KANNADA DAILY NEWS PAPER

ಮೇ 4 ರಂದು ಟಾಂಗಾ ಜಾಥಾ ಅಭಿಯಾನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮೇ 4 ರಂದು ಟಾಂಗಾ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. 

ನಗರದ ಸೆಟ್ ಲೈಟ್ ಬಸ್ ನಿಲ್ಲಾಣದಲ್ಲಿ ( ಹೊಸ ಬಸ್ ನಿಲ್ದಾಣ) ಸಂಜೆ 4 ಗಂಟೆಗೆ ಚಾಲನೆಗೊಳ್ಳುವ ಜಾಥಾ ಅಭಿಯಾನವು ಗ್ಯಾಂಗ್ ಬಾವಡಿ, ಮಹಾತ್ಮಾ ಗಾಂಧಿ ಶಾಲೆ, ಮಾನಸ ರೆಸಿಡೆನ್ಸಿ, ದರ್ಗಾ ಕ್ರಾಸ್, ಚಾಲುಕ್ಯ ನಗರ, ಉಮದಿ ಸೂಪರ್ ಬಜಾರ್ ಎದುರಿನ ರಸ್ತೆ, ಮಹೇಶ್ವರಿ ಭವನ ರಸ್ತೆ, ರೀಲೈನ್ಸ್ ಮಾಲ್ ರಸ್ತೆ, ಮಾರವಾಡಿ ಕಾಲೋನಿ, ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ ಮಾರ್ಗವಾಗಿ  ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ತಲುಪಲಿದೆ.

 ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, May 2, 2024

ಆಕಾಶವಾಣಿ ಸುದ್ದಿ ಸೇವೆಗಳ ವಿಭಾಗದ ನೂತನ ಮಹಾನಿರ್ದೇಶಕರಾಗಿ ಭಾರತೀಯ ಸುದ್ದಿ ಸೇವೆಯ ಹಿರಿಯ ಅಧಿಕಾರಿ ಮೌಶೂಮಿ ಚಕ್ರವರ್ತಿ ಸ್ವೀಕಾರ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಭಾರತೀಯ ಸುದ್ದಿ ಸೇವೆಯ ಹಿರಿಯ ಅಧಿಕಾರಿ ಮೌಶೂಮಿ ಚಕ್ರವರ್ತಿ ಆಕಾಶವಾಣಿ ಸುದ್ದಿ ಸೇವೆಗಳ ವಿಭಾಗದ ನೂತನ ಮಹಾನಿರ್ದೇಶಕರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

1991ರ ಐಐಎಸ್ ತಂಡದ ಅಧಿಕಾರಿಯಾಗಿರುವ ಅವರು ಮಾಧ್ಯಮ ಹಾಗೂ ಪ್ರಸಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಪಿಐಬಿ ಮತ್ತು ಕೇಂದ್ರೀಯ ಸಂವಹನ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ತಮ್ಮ 3 ದಶಕಗಳ ಸೇವಾನುಭವದಲ್ಲಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲೂ ಸಾಂದರ್ಭಿಕವಾಗಿ ಸೇವೆ ಸಲ್ಲಿಸಿದ್ದರು. ಆಕಾಶವಾಣಿ ಮಹಾ ನಿರ್ದೇಶಕರಾಗಿದ್ದ ವಸುಧಾ ಗುಪ್ತಾ ಅವರ ನಿವೃತ್ತಿ ಬಳಿಕ ಆ ಸ್ಥಾನಕ್ಕೆ ಮೌಶೂಮಿ ಚಕ್ರವರ್ತಿ ನೇಮಕಗೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.




Wednesday, May 1, 2024

02-05-2024 EE DIVASA KANNADA DAILY NEWS PAPER

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚನೆ



ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು. 

ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.


ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ ದಿನದಂದು ಫಲ ಸಿಗಲಿದೆ. ಚುನಾವಣಾ ಆಯೋಗದಿಂದ ಮುದ್ರಿಸಲಾದ ವೋಟರ್ ಗೈಡ್‍ನಲ್ಲಿ ಸಂಪೂರ್ಣವಾದ ಮಾಹಿತಿ ನೀಡಲಾಗಿದೆ. ಈ ಮಾಹಿತಿಯನ್ನು ಬಿಎಲ್‍ಓಗಳು, ಸೂಪರ್‍ವೈಸರ್‍ಗಳು ಸೇರಿದಂತೆ ನಿಯೋಜಿತ ಎಲ್ಲ ಅಧಿಕಾರಿಗಳು ತಿಳಿದುಕೊಂಡು ಪ್ರತಿ ಮನೆ-ಮನೆಗೆ ಭೇಟಿ ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು. ಮತಗಟ್ಟೆಗಳಲ್ಲಿ ಮತದಾರರರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಮನವರಿಕೆ ಮಾಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ತಂಪು ಕುಡಿಯುವ ನೀರಿನ ವ್ಯವಸ್ಥೆ, ರ್ಯಾಂಪ್ ವ್ಯವಸ್ಥೆ, ನಿರೀಕ್ಷಣಾ ಕೊಠಡಿ ವ್ಯವಸ್ಥೆ, ನೆರಳು ವ್ಯವಸ್ಥೆ, ತುರ್ತು ಸಂದರ್ಭಕ್ಕೆ ಅಂಬ್ಯೂಲೆನ್ಸ್ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ, ಓ.ಆರ್.ಎಸ್. ಪೊಟ್ಟಣಗಳು, ಶೌಚಾಲಯ ಸೇರಿದಂತೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪ್ರತಿ ಮತದಾರರಿಗೆ ಮಾಹಿತಿ ಒದಗಿಸುವ ಮೂಲಕ ಅವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೆಪಿಸಬೇಕು. ಬಿಎಲ್‍ಓ, ಸೂಪರ್‍ವೈಸರ್, ಆಶಾ ಕಾರ್ಯಕರ್ತೆರು ಮನೆಗಳಿಗೆ ಭೇಟಿ ನೀಡಿ ಪ್ರತಿ ಮನೆಯಲ್ಲಿ  ಕನಿಷ್ಠ 5 ನಿಮಿಷ ತಿಳಿ ಹೇಳುವ ಮೂಲಕ ಜಾಗೃತಿ ಮೂಡಿಸಬೇಕು  ಎಂದು ಅವರು ಹೇಳಿದರು. 

ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹ ವಿವಿಧ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದರಿಂದ ಬಿಎಲ್‍ಗಳಿಗೆ ಪ್ರೊತ್ಸಾಹ ದೊರೆಯಲಿದೆ. ಯುವ ಜನಾಂಗ, ಅಂಗವಿಕಲ ಮತದಾರ, ಹಿರಿಯ ನಾಗರೀಕ ಮತದಾರರಲ್ಲಿ ಹೆಚ್ಚಾಗಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತಿಯ ಎ.ಬಿ.ಅಲ್ಲಾಪುರ ಅವರು ಮಾಹಿತಿ ನೀಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧೆಡೆ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು  ಜಾಗೃತಿ ಮೂಡಿಸಲಾಗಿದೆ. ಮಾನವ ಸರಪಳಿ, ಕ್ಯಾಂಡಲ್ ಮಾರ್ಚ್, ಪ್ರಯಾಣಿಕರ ಜಾಗೃತಿಗಾಗಿ ವಿವಿಧ ಬಸ್ ನಿಲ್ದಾಣಗಳಲ್ಲಿ ಅನೌನ್ಸ್ಮೆಂಟ್ ಮೂಲಕ ಜಾಗೃತಿ, ವಿವಿಧ ನಿಲ್ದಾಣಗಳಲ್ಲಿ ಸೆಲ್ಫಿ ಸ್ಟ್ಯಾಂಡ್ ಅಳವಡಿಕೆ, ಬಸ್‍ಗಳಿಗೆ ಪೋಸ್ಟರ್ ಅಂಟಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ ಅಭಿಯಾನ ಹಮ್ಮಿಕೊಂಡ ಜಾಗೃತಿ ಮೂಡಿಸುವುದು, ಜಿಲ್ಲೆಯ ಕಾರ್ಮಿಕರಿರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಜಾಗೃತಿ, ವಿವಿಧ ಮಾಲ್, ಶೋರೂಂಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ 1528 ಸ್ಥಳಗಳಲ್ಲಿ ಚುನಾವಣಾ ಧ್ವಜಾರೋಹಣ, ಮಹಾನಗರ ಪಾಲಿಕೆ ವತಿಯಿಂದ 10 ಅಡಿ ಬಲೂನ್ ಅಳವಡಿಸಿ ಮತದಾನ ಜಾಗೃತಿ, ಸೇರಿದಂತೆ ಹತ್ತು ಹಲವಾರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಯ ಟಿ-ಶರ್ಟ್ ಹಾಗೂ ಕ್ಯಾಪ್‍ಗಳನ್ನು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಬಿಡುಗಡೆಗೊಳಿಸಿದರು. 

ಸಭೆಯಲ್ಲಿ    ಜಿಲ್ಲಾ ಸ್ವೀಪ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ,  ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ, ಮಹಾನಗರ ಪಾಲಿಕೆ ಆಯುಕ್ತ ಆರ್ಶದ ರೆಹಮಾನ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.