Saturday, August 24, 2024

ಜಿಲ್ಲಾಸ್ಪತ್ರೆ ಹಾಗೂ ವಿವಿಧ ವಸತಿ ನಿಲಯಗಳಿಗೆ ಉಪಲೋಕಾಯುಕ್ತರ ಭೇಟಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಸೂಚನೆ


 ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಜಿಲ್ಲಾಸ್ಪತ್ರೆಗೆ ದಿಡೀರ್ ಭೇಟಿ ನೀಡುವ ಮೂಲಕ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು.

 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳಿಂದ ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದಾಗ, ಇಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು, ಸರಿಯಾದ ಸಮಯಕ್ಕೆ ವೈದ್ಯರು ತಪಾಸಣೆ ಮಾಡಿ ಅಗತ್ಯ ಸಲಹೆ ಸೂಚನೆ ನೀಡುವ ಮೂಲಕ ಔಷಧೋಪಾಚಾರ, ನಿಗದಿತ ಸಮಯದಂತೆ ಆಸ್ಪತ್ರೆಯಿಂದ ಆಹಾರ ಒದಗಿಸುತ್ತಾರೆ ಎಂದು ಮಾಹಿತಿ ನೀಡಿದರು.

 ಆಸ್ಪತ್ರೆಯ ಪ್ರತಿ ಹಂತದ ವಾರ್ಡ್ಗಳಲ್ಲಿಯೂ ದಾಖಲಾಗಿರುವ ರೋಗಿ ಹಾಗೂ ಅವರ ಸಂಬAಧಿಕರ ಆರೋಗ್ಯ ವಿಚಾರಿಸುತ್ತಾ,ಅಲ್ಲಿನ ಹೊರ ರೋಗಿಗಳ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ಒಳರೋಗಿ ಚಿಕಿತ್ಸಾ ವಿಭಾಗ ಪರಿಶೀಲನೆ ನಡೆಸಿ ಉತ್ತಮ ಚಿಕಿತ್ಸೆ, ಔಷಧ ಅಗತ್ಯ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಮಾಹಿತಿ ಮಾಹಿತಿ ಕ್ರೋಡಿಕರಿಸಿದರು.


 ಡೆಂಗ್ಯೂ ವಾರ್ಡ್ಗೆ ಭೇಟಿ ನೀಡಿ ಅಲ್ಲಿ ಒದಗಿಸಲಾಗಿತ್ತಿರುವÀ ಚಿಕಿತ್ಸಾ ಸೌಕರ್ಯಗಳ ಬಗ್ಗೆ, ಚಿಕ್ಕಮಕ್ಕಳ ತೀವ್ರ ನಿಗಾ ಘಟಕಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ ಪರೀಕ್ಷಿಸಿ ಯಾವುದೇ ಲೋಪವಾಗದಂತೆ ಮಕ್ಕಳ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಹೇಳಿದರು. ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ವಿಭಾಗಕ್ಕೆ ತೆರಳಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. 

 ಅದಲ್ಲದೆ ತಾಯಿಮಕ್ಕಳ ವಿಭಾಗ, ವಿಶೇಷ ನವಜಾತ ಶಿಶು ಆರೈಕೆ ಘಟಕ, ಪ್ರಸೂತಿ ಅವಲಂಬನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪ ಲೋಕಾಯುಕ್ತ ತಂಡದ ಇತರ ಸದಸ್ಯರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಕುರಿತು ಉಪ ಲೋಕಾಯುಕ್ತರಿಗೆ ವರದಿ ನೀಡಿದರು. ಆಸ್ಪತ್ರೆಯ ಸ್ವಚ್ಚತೆ ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆಗೆ ಆಧ್ಯತೆ ನೀಡುವಂತೆ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ ಅವರಿಗೆ ಸೂಚಿಸಿದರು.

ವಸತಿ ನಿಲಯಗಳಿಗೆ ಭೇಟಿ, ಪರಿಶೀಲನೆ: 

ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಅರಕೇರಿ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

 ಅಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು ಊಟದ ಕೋಣೆ, ಅಡುಗೆ ಕೋಣೆಯನ್ನು ಪರಿಶೀಲಿಸಿ ಸ್ವಚ್ಚತೆಗೆ ಆಧ್ಯತೆ ನೀಡಿ ಗುಣಮಟ್ಟದ ಆಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಶೌಚಾಲಯಗಳ ಸ್ವಚ್ಚತೆ, ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಬೆಡ್, ಹಾಸಿಗೆಗಳನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಹದಿನೈದು ದಿನಗಳ ಕಾಲ ಮಿತಿಯೊಳಗೆ ಇಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ನಂತರ ನಗರದ ಅಡವಿ ಶಂಕರಲಿAಗ ದೇವಸ್ಥಾನದ ಹತ್ತಿರ ಇರುವ ಮೆಟ್ರಿಕ್ ನಂತರದ ಬಾಲಕಿಯರ ಇಂಜನೀಯರ್ ಮತ್ತು ಮೆಡಿಕಲ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿz ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಈ ವಸತಿನಿಲಯದಲ್ಲಿ ಗ್ರಂಥಾಲಯ, ಕಂಪ್ಯೂಟರ್ ಕೋಣೆಯನ್ನು ಪರಿವೀಕ್ಷೀಸಿ ಅಲ್ಲಿದ್ದ ವಿದ್ಯಾರ್ಥಿನಿಯರಿಂದ ಊಟದ ವ್ಯವಸ್ಥೆ, ಇತರ ಸಮಸ್ಯೆಗಳ ಕುರಿತಾಗಿ ಕುಂದುಕೊರತೆಯನ್ನು ಆಲಿಸಿದರು. 

ವಿದ್ಯಾರ್ಥಿನಿಯರು ಇಲಾಖೆ ನಿಗದಿಪಡಿಸಿರುವ ಮೆನುವಿನ ಪ್ರಕಾರ ಊಟ ನೀಡುತ್ತಾರೆ ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರೊಂದಿಗೆ ಸಮಾಲೋಚಿಸಿದ ಉಪಲೋಕಾಯುಕ್ತರು, ಸ್ವಚ್ಚತೆ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿ, ನಿಯಮಿತವಾಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು. ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಹಾಗೂ ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು.

 ಊಟದ ಕೋಣೆಯನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಅಡುಗೆಗೆ ಬಳಸುವ ಸಾಮಗ್ರಿಗಳ, ಆಹಾರದ ಗುಣಮಟ್ಟದ ಬಗ್ಗೆ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಇದು ಸ್ವತಃ ತಮ್ಮದೇ ಮನೆಯೆಂದು ತಿಳಿದು ಅಡುಗೆ ಕೋಣೆಯ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಹೇಳಿ ಸಿಬ್ಬಂದಿಯ ಹಾಜರಾತಿ ದಾಖಲೆ ಹಾಗೂ ಸಂಬಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

 ವಸತಿ ನಿಲಯದ ಕಟ್ಟಡವನ್ನು ಸರಿಯಾಗಿ ನಿರ್ವಹಿಸಿಕೊಂಡು,ವಸತಿನಿಲಯದ ಸುತ್ತಮುತ್ತ ಸ್ವಚ್ಚತೆಗೆ ಆದ್ಯತೆ ನೀಡಿ, ಭದ್ರತಾ ದೃಷ್ಟಿಯಿಂದ ರಾತ್ರಿಯ ವೇಳೆ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ವಸತಿನಿಲಯದ ಸುತ್ತಲೂ ಕಂಪೌAಡ್ ಗೋಡೆ, ಅವರಣದಲ್ಲಿ ಬೀದಿ ದೀಪಗಳ ವ್ಯವಸ್ಥೆ ಒದಗಿಸಿ ಸುರಕ್ಷತೆಗೆ ಆಧ್ಯತೆ ನೀಡಿ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 ಈ ಸಂದರ್ಭ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹಿರಿಯ ಸಿವ್ಹಿಲ್ ನ್ಯಾಯಾಧೀಶರಾz ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ಲೋಕಾಯುಕ್ತ ಅಧಿಕ್ಷಕರಾದ ಟಿ.ಮಲ್ಲೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾÁಪೂರ ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಡಿವೈಎಸ್‌ಪಿ ಸುರೇಶ ರೆಡ್ಡಿ, ಇನಸ್ಪೆಕ್ಟರ್ ಆನಂದ ಟಕ್ಕಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, August 23, 2024

ಗಡಿ ಭಾಗದ ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯ ಒದಗಿಸಬೇಕು: ಬಿಜ್ಜರಗಿ



ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ಕನ್ನಡ ಶಾಲೆಗಳಿಗೆ ರಾಜ್ಯ ಸರ್ಕಾರ ಕನ್ನಡ ಭಾಷೆಯ ನಲಿಕಲಿ ಸಾಹಿತ್ಯವನ್ನು  ಒದಗಿಸಬೇಕು ಎಂದು ಯುವ ವಿಕಾಸ ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಬಿಜ್ಜರಗಿ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಹೊಂದಿಕೊಂಡಿರುವ ಮಹರಾಷ್ಟ್ರದ ಗಡಿಯಲ್ಲಿ ಅನೇಕ ಕನ್ನಡ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಕನ್ನಡದ ಶಾಲೆಗಳು ಕನ್ನಡ ಭಾಷೆ, ಸಾಹಿತ್ಯ ಸೇರಿದಂತೆ ಕನ್ನಡದ ಕಂಪನ್ನು ಮಹರಾಷ್ಟ್ರದ ನೆಲದಲ್ಲಿ ಪಸರಿಸುತ್ತಿವೆ. ಇನ್ನು ಕನ್ನಡ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಬಂದು ಕಲಿಯುತ್ತಿದ್ದಾರೆ. ಕನ್ನಡ ಶಾಲೆಗಳಿಗೆ ಮಹರಾಷ್ಟ್ರ ಸರ್ಕಾರ ಅನೇಕ ಸವಲತ್ತುಗಳನ್ನು ನೀಡಿದೆ. ಕನ್ನಡ ಶಾಲೆಗೆ ಉಚಿತ ಪುಸ್ತಕಗಳು, ನೋಟ ಬುಕ್ ಗಳು ಸೇರಿದಂತೆ ಪಠ್ಯಕ್ಕೆ ಬೇಕಾಗುವ ಉಪಕರಣಗಳನ್ನು ನೀಡುತ್ತಿದೆ. ಆದರೆ ನಲಿಕಲಿ ಸಾಹಿತ್ಯಗಳು ಮರಾಠಿಯಲ್ಲಿ ಒದಗಿಸಲಾಗಿದೆ. ಕಾರಣ ಕನ್ನಡದ ಕಂದಮ್ಮಗಳಿಗೆ ಅದನ್ನು ಕನ್ನಡದ ಶಿಕ್ಷಕರು ತರ್ಜುಮೆ ಮಾಡಿ ಹೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಕನ್ನಡದ ಪುಟಾಣಿ ಕಣ್ಮಣಿಗಳಿಗೆ ಅದನ್ನ ಅರ್ಥೈಸಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿದೆ. ಕಾರಣ ಗಡಿ ಭಾಗದ ಕನ್ನಡ ಶಾಲೆಗೆ ರಾಜ್ಯ ಸರ್ಕಾರ ನಲಿಕಲಿ ಕನ್ನಡದ ಸಾಹಿತ್ಯಗಳನ್ನು ಒದಗಿಸಬೇಕು. ಇದರಿಂದ ಕನ್ನಡದ ಕಂದಮ್ಮಗಳಿಗೆ ಅನುಕೂಲವಾಗಲಿದೆ ಎಂದರು.

ರಾಜ್ಯದ ಎಲ್ಲ ಗಡಿ ಭಾಗದ ಕನ್ನಡ ಶಾಲೆಗೆ ನಲಿಕಲಿ ಕನ್ನಡದ ಸಾಹಿತ್ಯಗಳನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ಯುವ ವಿಕಾಸ ಸಂಘದ ಸದಸ್ಯ ಪ್ರಕಾಶ ಮೇಟಿ, ಪ್ರವೀಣ ಕುರ್ಲೆ, ಸಚಿನ್ ಗದ್ಯಾಳ, ರಾಜಕುಮಾರ ಗೌಂಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Thursday, August 22, 2024

ಸಿಟಿಐ, ಸಿವಿಲ್ ಪಿಎಸ್'ಐ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು: ಯತ್ನಾಳ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: 245 ಸಿಟಿಐ ಮತ್ತು 545 ಸಿವಿಲ್ ಪಿಎಸ್'ಐ ಹುದ್ದೆಗಳ ನೇಮಕಾತಿ ಸೇರಿದಂತೆ ಈಗಾಗಲೇ ನಡೆದಿರುವ ಲಿಖಿತ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗ ಆದಷ್ಟು ಬೇಗ ಪ್ರಕಟಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಪಿಸಿ (ಸಿವಿಲ್, ಸಿಎಆರ್,ಡಿಎಆರ್) ಹುದ್ದೆಯಿಂದ ದೂರ ಉಳಿಯುತ್ತಾರೆ. ಇದರಿಂದ ಬೇರೆಯವರಿಗೂ ಅವಕಾಶ ಸಿಗುತ್ತದೆ ಹಾಗೂ ತೇರ್ಗಡೆಯಾದವರಿಗೆ ಮತ್ತೆ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ.

ಪಿಸಿ ಪರೀಕ್ಷೆಯ ಫಲಿತಾಂಶ ಮೊದಲು ಬಿಡುಗಡೆಯಾಗಿ, ನಂತರ ಪಿಎಸ್'ಐ ಆಗಿ ಎರಡರಲ್ಲೂ ತೇರ್ಗಡೆಯಾದವರು ಪಿಸಿ ಬಿಟ್ಟು ಪಿಎಸ್'ಐ ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮತ್ತೆ ಬ್ಯಾಕ್ಲಾಗ್ ಆಗಿ ಸರ್ಕಾರಕ್ಕೂ ಅಭ್ಯರ್ಥಿಗಳಿಗೂ ತೊಂದರೆಯಾಗುವುದು ಖಚಿತ. 

ಒಂದು ಉದ್ಯೋಗ ಸಿಗುವುದರಿಂದ ಒಂದು ಮನೆಗೆ ಸಾಕಷ್ಟು ಆರ್ಥಿಕ ನೆರವಾಗುತ್ತದೆ. ಅಭ್ಯರ್ಥಿಯ ಭವಿಷ್ಯ ಸಧೃಡವಾಗುತ್ತದೆ. ಪರೀಕ್ಷೆ ಫಲಿತಾಂಶದ ವಿಳಂಬ, ಅನಿಶ್ಚಿತತೆ, ಅವೈಜ್ಞಾನಿಕ ವೇಳಾಪಟ್ಟಿ, ಅಭ್ಯರ್ಥಿ ಇರುವ ಊರಿಂದ ಬೇರೆ ಊರಿಗೆ ಪರೀಕ್ಷೆ ಸೆಂಟರ್ ನಿಗದಿ ಮಾಡುವುದನ್ನು ಬಿಟ್ಟು ಪರೀಕ್ಷಾರ್ಥಿಗಳ ಪರ ಆಯೋಗ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Wednesday, August 21, 2024

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು,  ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.



ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ  ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ.  ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ  ಪ್ರಧಾನಮಂತ್ರಿ ಅವರನ್ನು ಹಾಗೂ  ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು.

 ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ.  ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ.  ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು. 

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ)  ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ.  ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ  ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.

ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ  ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ.    ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ  ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ  ಬೇಡ ಎಂದು ಹೇಳಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 19, 2024

'ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ'' ತುಮಕೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಥಮ ರ‍್ಯಾಂಕ್ | ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಪ್ರದಾನ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

      ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ 'ಚಿನ್ನದ ಪದಕ'ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

        ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ 'ಗೋಲ್ಡ್ ಮೆಡಲ್' ನ ಸಾಧನೆ ತಂದಿದ್ದಾರೆ.

         ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್  ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

       ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ. 


  ''ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ 'ಚಿನ್ನದ ಪದಕ' ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ.

-ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


"ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ  ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ. 

 - ಡಾ. ಬಿ.ಟಿ ಮುದ್ದೇಶ (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


20-08-2024 EE DIVASA KANNADA DAILY NEWS PAPER